ಚಿಕ್ಕಮಗಳೂರು l ಭ್ರಷ್ಟಾಚಾರ ಆರೋಪ: ಶಾಸಕ ಟಿ.ಡಿ ರಾಜೇಗೌಡ, ಪತ್ನಿ, ಮಗನಿಗೆ ಲೋಕಾಯುಕ್ತರಿಂದ ಎಫ್‌ಐಆ‌ರ್ ದಾಖಲು

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ.

‘ಟಿ.ಡಿ. ರಾಜೇಗೌಡ ಅವರು ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಸರ್ಕಾರಕ್ಕೆ, ಮತ್ತು ಆದಾಯ ತೆರಿಗೆ ತನಿಖೆ ನಡೆಸಬೇಕು’ ಎಂದು ಕೊಪ್ಪ ನಿವಾಸಿ ದಿನೇಶ್ ಎಚ್.ಕೆ ದೂರಿನಲ್ಲಿ ಮನವಿ ಮಾಡಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಸೆ.16ರಂದು ಆದೇಶ ನೀಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತ್ತು.’ರಾಜೇಗೌಡ ಅವರ ಕುಟುಂಬ ಸದಸ್ಯರು ತಮ್ಮ ಆದಾಯ ಮೂಲಗಳಿಗೆ ತಾಳೆಯಾಗದಷ್ಟು ಆಸ್ತಿ ಸಂಪಾದಿಸಿದ್ದಾರೆ. ಅವರ ಪಾಲುದಾರಿಕೆ ಸಂಸ್ಥೆಯಾದ ಮೆ.ಶಬಾನಾ ರಂಜಾನ್‌ ವ್ಯವಹಾರಗಳು ಸಾಕ್ಷಿ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.1984ರಲ್ಲಿ ಸ್ಥಾಪಿತವಾದ ಈ ಸಂಸ್ಥೆಯಲ್ಲಿ ಪ್ರಾಥಮಿಕವಾಗಿ ಹಾಜಿ ಔರಂಗಜೇಬ್ ಮತ್ತು ಇತರರು ಪಾಲುದಾರರಾಗಿದ್ದರು. ನಂತರ 1992ರಲ್ಲಿ ಎಸ್.ವಿ. ಗಂಗಯ ಹೆಗೆ, ವಿ.ಜಿ. ಸಿದಾರ್ಥ ಹಾಗೂ ಮಾಳವಿಕಾ ಸಂಸ್ಥೆಗೆ ಪಾಲುದಾರರಾದರು. ಈ ಸಂಸ್ಥೆಯ ಮೂಲಕ ಅವರು 266 ಎಕರೆ ಕಾಫಿ ತೋಟ ಖರೀದಿಸಿದ್ದರು. 1993ರಲ್ಲಿ ಮೂಲ ಪಾಲುದಾರರು ಸಂಸ್ಥೆಯಿಂದ ಹಿಂದೆ ಸರಿದರು. ನಂತರ, ಕಂಪನಿಯು ತೋಟ ಅಡಮಾನವಿಟ್ಟು ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡಿತ್ತು.

2019ರಲ್ಲಿ ಸಿದ್ಧಾರ್ಥ ಹಾಗೂ ಗಂಗಯ್ಯ ಹೆಗ್ಡೆ ಅವರ ಮರಣದ ನಂತರ, ಶಾಸಕ ರಾಜೇಗೌಡರ ಪತ್ನಿ ಡಿ.ಕೆ. ಪುಷ್ಪಾ ಅವರನ್ನು ಶೇ 48ರಷ್ಟು ಪಾಲುದಾರರನ್ನಾಗಿ ಸೇರಿಸಲಾಯಿತು. ಕೆಲವು ತಿಂಗಳ ನಂತರ ಶಾಸಕರ ಪುತ್ರ ರಾಜ್‌ ದೇವ್ ಟಿ.ಆರ್. ಸಹ ಪಾಲುದಾರರಾದರು. ಸ್ಟ್ಯಾಂಡರ್ಡ್ ಚಾರ್ಟಡ್್ರ ಬ್ಯಾಂಕ್‌ಗೆ ₹55.75 ಕೋಟಿ, ಬ್ಯಾಂಕ್‌ ಆಫ್‌ ಬರೋಡಾಗೆ ₹66 ಕೋಟಿ ಹಾಗೂ ಕರ್ನಾಟಕ ಬ್ಯಾಂಕ್‌ಗೆ ₹81.95 ಲಕ್ಷ ಪಾವತಿಸಲಾಗಿದೆ. ಆದರೆ, ಲೋಕಾಯುಕ್ತಕ್ಕೆ ರಾಜೇಗೌಡರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಾರ್ಷಿಕ ಆದಾಯ ಕೇವಲ ₹40 ಲಕ್ಷ ಎಂದು ಘೋಷಿಸಿದ್ದಾರೆ’ ಎಂಬುದು ದೂರುದಾರರ ವಾದ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬಾನು ಮುಷ್ತಾಕ್ : ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ;ಎಂ.ಪಿ ಕುಮಾರಸ್ವಾಮಿ

ಈ ದಾಖಲೆಗಳನ್ನು ಲೋಕಾಯುಕ್ತರಿಗೆ ಸಲ್ಲಿಸಿದ್ದ ದಿನೇಶ್ ಅವರು, ತನಿಖೆ ನಡೆಸುವಂತೆ ಈ ಹಿಂದೆಯೇ ದೂರು ಸಲ್ಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆರೋಪಗಳು ನಿರಾಧಾರ ಎಂದು 2023ರಲ್ಲಿ ವರದಿ ನೀಡಿದ್ದರು. ದೂರುದಾರರು ಇದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ಎಫ್‌ಐಆ‌ರ್ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X