ಚಿಕ್ಕಮಗಳೂರು l ದೇವನಹಳ್ಳಿ ಚಲೋ: ಹೋರಾಟವನ್ನು ಬೆಂಬಲಿಸಿ ರೈತರು, ಕಾರ್ಮಿಕರಿಂದ ಪ್ರತಿಭಟನೆ

Date:

Advertisements

ದೇವನಹಳ್ಳಿ ಚಲೋ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಪ್ರತಿಭಟಿಸುತ್ತಿದ್ದ ರೈತರನ್ನು ಸರ್ಕಾರ ಕಡೆಗಣಿಸುತ್ತಿರುವುದನ್ನು ಖಂಡಿಸಿ, ರೈತಹೋರಾಟವನ್ನು ಬೆಂಬಲಿಸಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಗಲಗಂಚಿಯಲ್ಲಿ ರೈತರು ಹಾಗೂ ಕಾರ್ಮಿಕ ಬಳಗದವರಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

Screenshot 2025 06 27 18 03 09 46 7352322957d4404136654ef4adb64504

ದೇವನಹಳ್ಳಿಯಲ್ಲಿ ನಡೆಯುತ್ತಿರುವ ಹೋರಾಟ, ರೈತರ ಭೂಮಿಯನ್ನು ಕಬಳಿಸುತ್ತಿರುವ ಈ ಆಡಳಿತ ಸರ್ಕಾರ ಯೋಗ್ಯ ಕೃಷಿ ಭೂಮಿಯನ್ನು ರೈತರಿಂದ ಬಲವಂತವಾಗಿ ಕಿತ್ತುಕೊಳ್ಳುತ್ತಿದೆ. ರೈತರ ಬದುಕನ್ನು ಈ ಸರ್ಕಾರ ನಿರ್ನಾಮ ಮಾಡಲು ಹೊರಟಿದೆ ಎಂದು ರೈತ ವೆಂಕಟೇಶ ಹಾಗಲಗಂಚಿ ಅವರು ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ನಡೆಯುತ್ತಿರುವ ಇಂತಹ ಹೋರಾಟಗಳನ್ನು ನಾಡಿನ ಎಲ್ಲ ರೈತರೂ ಬೆಂಬಲಿಸಿ ಜೊತೆಗೆ ನಿಲ್ಲಬೇಕಾಗಿದೆ. ನಮ್ಮ ಭೂಮಿಯನ್ನು ನಾವೇ ಹೋರಾಟ ಮಾಡಿ ಪಡೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ. ರೈತರ ಭೂಮಿಯನ್ನು ಕಬಳಿಸಿ ಖಾಸಗಿಕರಣ ಮಾಡಲು ಹೊರಟಿರುವ ಈ ಸರ್ಕಾರಕ್ಕೆ ಧಿಕ್ಕಾರ ಎಂದು ಸಾಮಾಜಿಕ ಹೋರಾಟಗಾರರಾದ ಗುರುಮೂರ್ತಿ ಜೋಗಿಬೈಲ್ ಅವರು ತಿಳಿಸಿದರು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಹನ ಅಪಘಾತ: ಇಬ್ಬರಿಗೆ ಗಂಭೀರ

ಈ ವೇಳೆ ಸುತ್ತಮುತ್ತಲಿನ ಗ್ರಾಮದ ಐವತ್ತಕ್ಕೂ ಹೆಚ್ಚು ರೈತರು ಹಾಗೂ ಕಾರ್ಮಿಕರು ಭಾಗವಹಿಸಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X