ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳು ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37), ಬಿ. ಕಣಬೂರು ಗ್ರಾಮದ ವಾಟುಕೂಡಿಗೆ ಬಸ್ ನಿಲ್ದಾಣದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದು, ಸುಮಾರು 15,000/- ರೂ ಬೆಲೆ ಬಾಳುವ 680.00 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಜಾಗಕ್ಕೆ ಶೆಡ್ ನಿರ್ಮಾಣ; ದಲಿತ ಕಾರ್ಮಿಕರ ಹೋರಾಟಕ್ಕೆ ಅಶೋಕ್ ಬೆಂಬಲ
ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣಾ ಪಿ.ಎಸ್.ಐ ರವೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿತ ಆರೋಪಿಯಾದ ಸಂತೋಷ್ ಆಂದ್ರ ಪ್ರದೇಶದ ವೈಜಾಕ್ ನಿಂದ ಗಾಂಜಾ ತಂದು ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.