ಚಿಕ್ಕಮಗಳೂರು l ಕನಕದಾಸರು ಒಂದು ಜಾತಿಗೆ ಸೀಮಿತರಲ್ಲ: ಶಾಸಕ ಜಿ ಎಚ್ ಶ್ರೀನಿವಾಸ್

Date:

Advertisements

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಂಯುಕ್ತ ಆಶ್ರಯದಲ್ಲಿ ತರೀಕೆರೆ ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ನಡೆಸಲಾಯಿತು.

ಕನಕದಾಸರು, ಮಡಿವಾಳ ಮಾಚಿದೇವ, ಬಸವಣ್ಣನವರು ವಾಲ್ಮೀಕಿಯವರು ಸಮಾಜದ ಸುಧಾರಕರಾಗಿದ್ದಾರೆ. ಅವರು ಯಾವುದೇ ಜಾತಿಗೆ ಸೀಮಿತರಾಗಿಲ್ಲ ಎಂದು ಶಾಸಕ ಜಿ ಎಚ್ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನಕದಾಸರು ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ. ಕೀರ್ತನೆಗಳ ಮೂಲಕ  ಸಮ ಸಮಾಜ ನಿರ್ಮಾಣದ ಗುರಿ ಹೊಂದಿದ್ದರು ಎಂದು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪುರಸಭಾ ಅಧ್ಯಕ್ಷರಾದ ವಸಂತಕುಮಾರ್ ಕವಾಲಿ ಅವರು ತಿಳಿಸಿದರು.

Advertisements

ಕನಕದಾಸರು ಭಕ್ತಿಯ ಮಾರ್ಗದಲ್ಲಿ ಸಮಾಜ ಸುಧಾರಣೆಗೆ ತೊಡಗಿದರು. ಮಡಿವಂತಿಕೆ ಮನಸ್ಸಿನಲ್ಲಿರಬೇಕು. ಶಿಕ್ಷಣ ಮತ್ತು ಆಧ್ಯಾತ್ಮಿಕ ಜ್ಞಾನದ ಅರಿವಿನ ಬಗ್ಗೆ ಮಹತ್ವ ನೀಡಿದ್ದಾರೆ. ಅವರ ಕೀರ್ತನೆಗಳು, ಆದರ್ಶಗಳು ಸಮಾಜದ ಬದಲಾವಣೆಯನ್ನು ಬಯಸಿದೆ ಎಂದು ಉಪ ವಿಭಾಗ ಅಧಿಕಾರಿ ಡಾ. ಕೆ ಜೆ ಕಾಂತರಾಜ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುರುಬ ಸಂಘ 1944 ರಿಂದ ಸಂಘಟಿತವಾಗಿದೆ. ದಿವಂಗತ ನಾಗಪ್ಪ, ಪರಮೇಶ್ವರಪ್ಪ, ಟಿ.ಹೆಚ್ ಶಿವಶಂಕರಪ್ಪ, ಹಾಗೂ ಎರಡು ಬಾರಿ ಜಿಎಚ್ ಶ್ರೀನಿವಾಸ್ ಅವರು ಶಾಸಕರಾಗಿದ್ದಾರೆ. ಹೀಗೆ ನಾಲ್ಕು ಜನರು ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸಂಘವು ಸಮಾಜ ಸೇವೆಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ಕೊಟ್ಟಿದೆ ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷರಾದ ಟಿ ಎಸ್ ರಮೇಶ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಮೂಡಿಗೆರೆ l ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕ ಕೆರೆಗೆ ಬಿದ್ದು ಸಾವು

ಈ ವೇಳೆ ಪುರಸಭಾ ಉಪಾಧ್ಯಕ್ಷರಾದ ಗಿರಿಜಾ ಪ್ರಕಾಶ್, ಎಂ ನರೇಂದ್ರ, ಡಾ. ಭರತ್ ಅಂಚೆ, ಲಕ್ಷ್ಮಿದೇವಮ್ಮ ಮಾತನಾಡಿದರು. ನವೀನ್ ಕುಮಾರ್ ಉಪನ್ಯಾಸ ನೀಡಿದರು.

ಇದೆ ಸಂದರ್ಭದಲ್ಲಿ ಡಾ. ಶಿವಶಂಕರ್, ಡಾ. ದ್ರಾಕ್ಷಿಯಾನಿ, ಎಂ ನರೇಂದ್ರ, ಲಕ್ಷ್ಮೀದೇವಮ್ಮ, ಭಾಗ್ಯಮ್ಮ, ಧನ್ಯಶ್ರೀ, ಟಿ ಜಿ ಮಂಜುನಾಥ್, ಆರ್ ದೇವಾನಂದ, ಟಿ ವಿ ಶಿವಶಂಕರಪ್ಪ, ವೇದಿಕೆಯಲ್ಲಿ ಪೊಲೀಸ್ ಅಧಿಕಾರಿ ಹಾಲುಮೂರ್ತಿರಾವ್, ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಪೊಲೀಸ್ ನಿರೀಕ್ಷಿಕರಾದ ರಾಮಚಂದ್ರನಯ್ಕ್, ಪುರಸಭೆ ಮುಖ್ಯಧಿಕಾರಿ ಎಚ್ ಪ್ರಶಾಂತ್, ಗಂಗಾಧರ್, ಇ ಓ. ಡಾ. ದೇವೇಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಪುರಸಭಾ ಸದಸ್ಯರಾದ ಟಿಜಿ ಶಶಾಂಕ್, ಚೇತನ್, ಗೀತಾ ಗಿರಿರಾಜ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಯ್ಯ, ದರ್ಶನ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X