ಚಿಕ್ಕಮಗಳೂರು l ಭೂಮಿ, ವಸತಿ ಹಕ್ಕಿಗಾಗಿ ಹಕ್ಕೋತ್ತಾಯ: ದಸಂಸ ಪ್ರತಿಭಟನೆ

Date:

Advertisements

ದಲಿತರ ಭೂಮಿ ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಪ್ರತಿಭಟನಾ ಧರಣಿಯನ್ನು ದಸಂಸ (ಅಂಬೇಡ್ಕರ್ ವಾದ ) ವತಿಯಿಂದ ಶುಕ್ರವಾರ ಚಿಕ್ಕಮಗಳೂರು, ಮೂಡಿಗೆರೆ, ಕಳಸ ಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿದೆ.

Screenshot 2025 07 18 20 02 18 04 99c04817c0de5652397fc8b56c3b3817

ಹತ್ತಾರು ವರ್ಷಗಳಿಂದ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂಹೀನ ಬಡ ರೈತರು ಫಾರಂ ನಂ. 50, 53, 57ರಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಪತ್ರಕ್ಕಾಗಿ ಕಾಯುತ್ತಿದ್ದಾರೆಂದು ದಸಂಸ ಮುಖಂಡ ಮರ್ಲೆ ಅಣ್ಣಯ್ಯ ಈದಿನ.ಕಾಮ್ ಜೊತೆ ಮಾತಾಡಿದರು.

Screenshot 2025 07 18 20 01 47 30 99c04817c0de5652397fc8b56c3b3817

ಪಿಟಿಸಿಎಲ್ ಕಾಯ್ದೆ ಪ್ರಕಾರ ಜಮೀನುಗಳನ್ನು ಕೈಬಿಡುವಂತೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನಲ್ಲಿ ಸಾವಿರಾರು ಸಂಖ್ಯೆಯ ನಿವೇಶನ ರಹಿತರಿದ್ದು, ಅವರಿಗೆ ನಿವೇಶನ, ಮಸಣಕ್ಕೆ ಭೂಮಿ ನೀಡಲು ಹಾಗೂ ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ದಸಂಸ ಮುಖಂಡರಾದ ಮಂಜಯ್ಯ ತಿಳಿಸಿದರು.

Advertisements
Screenshot 2025 07 18 20 03 28 28 7352322957d4404136654ef4adb64504

ಈ ಸಂಬಂಧ ಸರ್ಕಾರ ಶಾಸಕರ ಸಮಿತಿಯನ್ನು ನೇಮಿಸಿದ್ದರೂ, ಇದುವರೆಗೂ ನಮ್ಮ ಶಾಸಕರು ಸಭೆ ಕರೆಯದೇ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ನಾವೆಲ್ಲರೂ ಖಂಡಿಸುತ್ತೇವೆ. ಕಂದಾಯ ಭೂಮಿಯನ್ನು ಭೂಹೀನರಿಗೆ ಹಂಚಬೇಕು. ಹಾಗೆಯೇ, ಅಧಿಕಾರಿಗಳ ಕಚೇರಿಗೆ ಅಲೆದರೂ, ಕೆಲಸ ಮಾತ್ರ ಆಗುತ್ತಿಲ್ಲವೆಂದು ಪ್ರತಿಭಟನೆಗೆ ಬಂದಿದ್ದ ಜನರು ಅಭಿಪ್ರಾಯವನ್ನು ಈದಿನ. ಕಾಮ್ ಜೊತೆ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಇಂದು ಎಲ್ಲಾ ತಾಲೂಕು ಕಚೇರಿಗಳ ಮುಂದೆ ಬೃಹತ್ ಪ್ರತಿಭಟನೆ – ಆಶಾ ಸಂತೋಷ್

ಈ ಕುರಿತು ಚಿಕ್ಕಮಗಳೂರು ತಾಲೂಕಿನ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಹಾಗೆಯೇ, ಪ್ರತಿಭಟನೆಗೆ ದಸಂಸ ಮುಖಂಡರು, ಕಾರ್ಯಕರ್ತರು, ಎದ್ದೇಳು ಕರ್ನಾಟಕ ಮುಖಂಡರು, ಸದಸ್ಯರು, ಹಾಗೂ ಹಲವು ಸಂಘಟನೆಯವರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X