ಚಿಕ್ಕಮಗಳೂರು | ಅನಧಿಕೃತ ಶಾಲೆಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಆಗ್ರಹ

Date:

Advertisements

ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರೀಯಾ ಅವರಿಗೆ ಮನವಿ ಸಲ್ಲಿಸಿದರು.

“ನಗರದ ಹೃದಯಭಾಗದ ದೀಪಾ ನರ್ಸಿಂಗ್ ಮುಂಭಾಗದ ಬೈಪಾಸ್ ರಸ್ತೆಯ ವಾಣಿಜ್ಯ ಸಂಕೀರ್ಣದಲ್ಲಿ ಕಳೆದ ಎರಡು ತಿಂಗಳಿನಿಂದ ನರ್ಸರಿಯಿಂದ 8ನೇ ತರಗತಿವರೆಗೆ ಅನಧಿಕೃತ ಶಾಲೆಯನ್ನು ತೆರೆಯಲಾಗಿದೆ. ದಾಖಲಾತಿ ಕೋರಿ ಸಾರ್ವಜನಿಕ, ಬಹಿರಂಗ ಹಾಗೂ ಕಾನೂನು ಬಾಹಿರವಾಗಿ ಅನೇಕ ತಿಂಗಳಿಂದ ಶಾಲೆಯನ್ನು ನಡೆಸಲಾಗುತ್ತಿದೆ. ಅಲ್ಲದೆ ಈ ಹೆಸರಿನಲ್ಲೇ ನೂತನ ನ್ಯಾಯಾಲಯದ ಕಟ್ಟಡದ ಬಳಿ ಮತ್ತೊಂದು ಶಾಲೆಯನ್ನು ತೆರೆಯಲಾಗಿದೆ” ಎಂದು ಸಾರ್ವಜನಿಕ ಹಿತರಕ್ಷಣಾ ವೇದಿಕೆ ವಿನೋದ್‌ ಬೊಗಸೆ ತಿಳಿಸಿದರು.

ಈ ಸಂಬಂಧ ಬೈಪಾಸ್‌ನ ವಾಣಿಜ್ಯ ಸಂಕೀರ್ಣದಲ್ಲಿ ಅನಧಿಕೃತ ಶಾಲೆಗೆ ದಾಖಲಾಗಿರುವ ಮಕ್ಕಳ ಭವಿಷ್ಯವನ್ನು ಹಾಳುಮಾಡುವ ಹುನ್ನಾರದಿಂದ ಸಾರ್ವಜನಿಕ ವಲಯದಲ್ಲಿ ಒಳಪಟ್ಟಿದ್ದನ್ನು ಗಮನಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಸ್ಥಳಕ್ಕೆ ತೆರಳಿ ಪರೀಕ್ಷಿಸಿದ್ದು, ಕೂಡಲೇ ಅನಧಿಕೃತ ಶಾಲೆಯ ಕಡಿವಾಣಕ್ಕೆ ಉಸ್ತುವಾರಿ ಕಾರ್ಯದರ್ಶಿಗಳು ಮುಂದಾಗಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

ಈ ವೇಳೆ ಸಮಿತಿಯ ಉಪಾಧ್ಯಕ್ಷ ಕೋಟೆ ಸೋಮಣ್ಣ, ಕಾರ್ಯದರ್ಶಿ ಎಸ್‌ಡಿಎಂ ಮಂಜು, ಸದಸ್ಯರಾದ ಸಿ ಹೆಚ್ ಶ್ರೀನಿವಾಸ್, ರಾಜೇಶ್, ರಿಜ್ವಾನ್, ಶ್ರೀಧರ್, ಪಾಪಣ್ಣ, ಶರತ್‌ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X