ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯದಿಂದ ಯುವಕ ಆತ್ಮಹತ್ಯೆ: ನ್ಯಾಯ ಸಿಗದಿದ್ದರೇ ಬೃಹತ್ ಪ್ರತಿಭಟನೆ; ದಸಂಸ ಎಚ್ಚರಿಕೆ

Date:

Advertisements

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮದ ಅಮಾಯಕ ಆಟೋ ಚಾಲಕ ನಾಗೇಶ್ ಎಂಬ ದಲಿತ ಯುವಕನ ದುರಂತ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಈ ಕುರಿತು ನ್ಯಾಯ ಸಿಗದಿದ್ದರೇ ಬೃಹತ್ ಪ್ರತಿಭಟನೆ ಮಾಡುತ್ತೇವೆಂದು ದಸಂಸ ಕರೆ ನೀಡಿದೆ.

ಕಾವಲುಗಾರರೇ ಹಂತಕರಾದಾಗ, ನ್ಯಾಯಕ್ಕೆ ಧ್ವನಿಯಾಗಬೇಕಿದೆ. ನಾಗೇಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮತ್ತಷ್ಟು ನೋವಿನ ಸಂಗತಿಯಾಗಿದೆ. ಕೇವಲ ಒಂದು ಆತ್ಮಹತ್ಯೆಯಲ್ಲ, ಪೊಲೀಸ್ ದಬ್ಬಾಳಿಕೆಗೆ ಬಲಿಯಾದ ನಾಗೇಶ್ ಸಾವಿಗೆ ನ್ಯಾಯ ಸಿಗಬೇಕು. ಸಾವಿಗೆ ನೇರ ಕಾರಣರಾದ ಪೊಲೀಸ್ ಪೇದೆಯಾದ ಸಿದ್ದೇಶ್ ಮತ್ತು ಸಹಚರರಾದ ಸುರಕ್ಷಿತ್, ಶಶಿ ಮತ್ತು ಸುಳ್ಳು ಕೇಸು ದಾಖಲಿಸಿ ಆರೋಪಿಗಳಿಗೆ ನೆರವಾದ ಭ್ರಷ್ಟ ಪಿಎಸ್ಐ ಆದರ್ಶ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದಸಂಸ ಮುಖಂಡರಾದ ಆಶಾ ಸಂತೋಷ್ ಈದಿನ.ಕಾಮ್ ಜೊತೆ ಮಾತಾಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯಕ್ಕೆ ಬಲಿಯಾದ ದಲಿತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ:  ಕರ್ನಾಟಕ ಜನಶಕ್ತಿಯಿಂದ ಕಳಸ ಚಲೋ ಎಚ್ಚರಿಕೆ

Advertisements

ನಾಗೇಶ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೇ ಕರ್ನಾಟಕದಾದ್ಯಂತ ಎಲ್ಲಾ ಸಂಘಟನೆಯವರು ಒಗ್ಗಟ್ಟಾಗಿ ಬೃಹತ್ ಹೋರಾಟ ಮಾಡುತ್ತೇವೆಂದು ದಸಂಸ ಮುಖಂಡೆ ಆಶಾ ಸಂತೋಷ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X