ಚಿಕ್ಕಮಗಳೂರು | ಭೂ ಹಗರಣ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಸರ್ಕಾರ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣವನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಎರಡೂ ತಾಲೂಕುಗಳಲ್ಲಿ ನೀತಿ ನಿಯಮಗಳನ್ನು ಮೀರಿ ಕಾನೂನುಬಾಹಿರವಾಗಿ ಸುಮಾರು 6,000ಕ್ಕೂ ಅಧಿಕ ಎಕರೆ ಭೂಮಿ ಮಂಜೂರು ಆಗಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ತಿಳಿಸಿದ್ದಾರೆ.

- Advertisement -

ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಅವರು ನೀಡಿದ್ದು, ” ಅಂಕಿ ಅಂಶ ದಾಖಲೆಗಳನ್ನು ಪರಿಗಣಿಸಿ ತನಿಖೆ ನಡೆಸುತ್ತಿದ್ದು, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮೂಡಿಗೆರೆ ತಾಲೂಕಿನಲ್ಲಿ 2000 ಪ್ರಕರಣ ಬೆಳಕಿಗೆ ಬಂದಿದ್ದು, ಅದರಲ್ಲಿ 1320 ಪ್ರಕರಣಗಳಲ್ಲಿ 3700 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಭೂ ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ ಅನುಮಾನಚೆಂದು ಪರಿಗಣಿಸಿರುವ 640 ಪ್ರಕರಣಗಳಲ್ಲಿ 1,500 ಎಕರೆ ಭೂಮಿ ಮಂಜೂರಾಗಿದೆ. ಇದರಲ್ಲಿ ಸ್ವಲ್ಪ ಏರಿಳಿತಗಳು ಆಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

“ಕಡೂರು ತಾಲೂಕಿನಲ್ಲಿ 2240 ಪ್ರಕರಣ ಬೆಳಕಿಗೆ ಬಂದಿದ್ದು, 1,030 ಪ್ರಕರಣಗಳಲ್ಲಿ 2,500 ಎಕರೆ ಭೂಮಿ ಅಕ್ರಮವಾಗಿ ಮಂಜೂರು ಆಗಿದ್ದು, ಇದರಲ್ಲಿ ಅರಣ್ಯ ಭೂಮಿಯೂ ಸೇರಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು ಪುರಸಭೆಯ ನಾಲ್ವರ ಸದಸ್ಯತ್ವ ಅನರ್ಹ; ಜಿಲ್ಲಾಧಿಕಾರಿ ಆದೇಶ

“ಎರಡನೇ ಹಂತದಲ್ಲಿ 961 ಅನುಮಾನಾಸ್ಪದ ಪ್ರಕರಣವೆಂದು ಗುರುತಿಸಲಾಗಿದೆ. ಅರ್ಜಿ ಸಲ್ಲಿಸದೆ, ಸಮಿತಿ ಒಪ್ಪಿಗೆ ಪಡೆಯದೆ ಸರ್ಕಾರಿ ಗೋಮಾಳ ಸೇರಿದಂತೆ ಭೂಮಿಯನ್ನು ಮಂಜೂರು ಮಾಡಿದ್ದು, ಕೆಲವು ಪ್ರಕರಣಗಳಲ್ಲಿ ಕಡತಗಳೇ ಇಲ್ಲ. ತನಿಖೆಯ ಪ್ರಗತಿಯನ್ನು ಪ್ರತಿದಿನ ತಾವೇ ಖುದ್ದಾಗಿ ಪರಿಶೀಲಿಸುತ್ತಿದ್ದು, ಕಂದಾಯ ಆಯುಕ್ತರು ಭೇಟಿ ನೀಡಿ ವರದಿಯನ್ನು ಪಡೆಯಲಾಗಿದೆ” ಎಂದರು.

“20 ದಿನದಲ್ಲಿ ಸ್ಪಷ್ಟವಾದ ವರದಿ ಸಲ್ಲಿಕೆ ಆಗುವ ಸಾಧ್ಯತೆಗಳಿವೆ. ಬಡವರಿಗೆ ತೊಂದರೆ ಇಲ್ಲ. ಭೂ ಒತ್ತುವರಿಗೆ ಸಂಬಂಧಿಸಿದಂತೆ ಅನುಮಾನಾಸ್ಪದ ಪ್ರಕರಣಗಳಲ್ಲಿ ಬಡವರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...