ಚಿಕ್ಕಮಗಳೂರು | ಮತ್ತೆ ಮಂಗನ ಕಾಯಿಲೆ ಆತಂಕ; ಹೈ-ಅಲರ್ಟ್‌ ಘೋಷಣೆ

Date:

Advertisements

ಚಿಕ್ಕಮಗಳೂರು ಜಿಲ್ಲೆಯನ್ನು ಮಂಗನ ಕಾಯಿಲೆ ಕಳೆದ 7-8 ವರ್ಷಗಳಿಂದ ಕಾಡುತ್ತಲೇ ಇದೆ. ಮಳೆ ಮತ್ತು ಚಳಿಗಾಲದಲ್ಲಿ ಕಾಯಿಲೆ ಆತಂಕ ಹೆಚ್ಚುತ್ತಲೇ ಇರುತ್ತದೆ. ಇದೀಗ, ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಹೈ-ಅಲರ್ಟ್‌ ಘೋಷಿಸಿದೆ. ಆರೋಗ್ಯ ತಪಾಸಣೆಗಳನ್ನು ಹೆಚ್ಚಿಸಿದೆ.

ಚಿಕ್ಕಮಗಳೂರು ಬಳಿಯ ಮತ್ತಿಖಂಡ ಗ್ರಾಮದ ಯುವಕನೊಬ್ಬ ಮಂಗನ ಕಾಯಿಲೆಗೆ ತುತ್ತಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವಕನಿಗೆ ರಕ್ತ ಪರೀಕ್ಷೆ ಮಾಡಿಸಲಾಗಿತ್ತು. ರಕ್ತ ಪರೀಕ್ಷೆ ವರದಿಯಲ್ಲಿ ಆತ ಮಂಗನ ಕಾಯಿಲೆಗೆ ತುತ್ತಾಗಿದ್ದಾನೆ ಎಂದು ದೃಢಪಟ್ಟಿದೆ. ಯುವಕನ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಿಖಂಡ ಗ್ರಾಮದಲ್ಲಿ ಹೆಚ್ಚಿನ ನಿಗಾ ಇಡುವಂತೆ ಆರೋಗ್ಯ ಇಲಾಖೆ ಘೋಷಿಸಿದೆ. ಗ್ರಾಮದಲ್ಲಿ ಉಣ್ಣೆಗಳನ್ನು ಸಂಗ್ರಹಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಕೋತಿಗಳು ಸಾವನ್ನಪ್ಪಿದ್ದರೆ, ಅದರ ನಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

Advertisements

2024ರಲ್ಲಿಯೂ ಜಿಲ್ಲೆಯಲ್ಲಿ ಸುಮಾರು 132 ಮಂದಿ ಮಂಗನ ಕಾಯಿಲೆಗೆ ತುತ್ತಾಗಿದ್ದರು. ಅವರಲ್ಲಿ, ನಾಲ್ವರು ಸಾವನ್ನಪ್ಪಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X