ಚಿಕ್ಕಮಗಳೂರು | ಮಲೆನಾಡಿನಲ್ಲಿ ಅಪರೂಪಕ್ಕೆ ಪತ್ತೆಯಾದ ರಕ್ತಗನ್ನಡಿ ಹಾವು

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿ ಸ್ನೇಕ್ ರಿಜ್ವಾನ್ ಅವರ ಮನೆಯ ಬಳಿ ಅಪರೂಪದ ರಕ್ತಗನ್ನಡಿ ಹಾವು ಕಾಣಿಸಿಕೊಂಡಿದೆ.

ರಕ್ತಗನ್ನಡಿ ಹಾವು ವಿಷಕಾರಿ ಹಾವುಗಳಲ್ಲಿ ಒಂದಾಗಿದ್ದು, ಉರಗ ತಜ್ಞರೊಬ್ಬರ ಮನೆಯಂಗಳದಲ್ಲಿ, ಹಾವನ್ನು ನೋಡಿದ ಅವರ ಪತ್ನಿ ಪತಿಗೆ ತಿಳಿಸಿದ್ದಾರೆ. ಇದನ್ನು ಗಮನಿಸಿದ ರಿಜ್ವಾನ್ ಹಾವನ್ನು ಜೋಪಾನವಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ರಿಜ್ವಾನ್, “ಇದು ಅಪರೂಪದ ಮತ್ತು ವಿಷಕಾರಿ ಹಾವುಗಳಲ್ಲಿ ಒಂದಾದ ಕೋರಲ್ ಸ್ನೇಕ್, ಹವಳದ ಹಾವು ಎಂದು ಗುರುತಿಸಿಕೊಂಡಿದೆ. ಮಲೆನಾಡಲ್ಲಿ ಹಪ್ಪಟೆ ಹಾವು ಹಾಗೂ ರಕ್ತಗನ್ನಡಿ ಹಾವು ಎಂದೇ ಪ್ರಚಲಿತದಲ್ಲಿದೆ” ಎಂದು ತಿಳಿಸಿದರು.

Advertisements

“ರಕ್ತಗನ್ನಡಿ ಹಾವು ಅತ್ಯಂತ ವಿಷಕಾರಿ. ಆದರೆ ಈ ಹಾವು ಕಚ್ಚಿ ಸತ್ತವರ ಪ್ರಕರಣ ಕಡಿಮೆ. ಇದರ ಹಲ್ಲುಗಳು ಮುಂಭಾಗದಲ್ಲಿ ತುಸು ಹೆಚ್ಚೇ ಬಾಗಿರುವ ಕಾರಣ ಇದು ಕಚ್ಚುವ ಸಂದರ್ಭದಲ್ಲಿ ವಿಷ ದೇಹಕ್ಕೆ ಸೇರುವುದು ಕಡಿಮೆ. ಪಶ್ಚಿಮಘಟ್ಟದಲ್ಲಿ ಈ ಹಾವು ಕಂಡು ಬರುತ್ತವೆ. ವಿಶೇಷವೆಂದರೆ ಹಾವಿನ ಕೆಳಭಾಗ ಕೆಂಪು ಬಣ್ಣದಲ್ಲಿದ್ದು ಗಮನ ಸೆಳೆಯುತ್ತವೆ” ಎಂದು ಸ್ನೇಕ್ ರಿಜ್ವಾನ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪುರಸಭೆ ಅಧಿಕಾರಿಗಳ ಏಕಾಏಕಿ ದಾಳಿ; ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಸ್ನೇಕ್ ರಿಜ್ವಾನ್ ಅವರು ಸಾವಿರಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದಾರೆ ಇವರು ಎಲ್ಲ ತರಹದ ಹಾವುಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೆಬ್ಬಾವು, ಕಾಳಿಂಗ ಸರ್ಪ, ನಾಗರಹಾವು, ಕನ್ನಡಿಯ ಹಾವು ಸೇರಿದಂತೆ ಇನ್ನೂ ಇತರ ಹಾವುಗಳನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಡಿಗೆ ಬಿಟ್ಟಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X