ಚಿಕ್ಕಮಗಳೂರು | ದುರುದ್ದೇಶ, ಪ್ರತಿಕಾರದ ವಕ್ಫ್ ಮಸೂದೆ ಹಿಂಪಡೆಯಿರಿ: ಎಸ್‌ಡಿಪಿಐ ಆಕ್ರೋಶ

Date:

Advertisements

ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಮಾತನಾಡಿ, “ಒಕ್ಕೂಟ ಬಿಜೆಪಿ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದ್ದು, ಇದು ಸಂವಿಧಾನ ವಿರೋಧಿಯಾಗಿದೆ. ಈ ಹಿಂದೆ ಮುಸಲ್ಮಾನರು ಸಮುದಾಯದ ಧಾರ್ಮಿಕ ಚಟುವಟಿಕೆಗಳಿಗೆ ಬಳುಸುವ ಸಲುವಾಗಿ ತಮ್ಮ ಆಸ್ತಿಗಳನ್ನು ವಕ್ಫ್ ಬೋರ್ಡ್‌ಗೆ ಹಸ್ತಾಂತರಿಸಿ ದಾನ ಮಾಡಿರುವುದಾಗಿದೆ. ಇದು ಮುಸ್ಲಿಮರ ಖಾಸಗಿ ಸ್ವತ್ತಾಗಿದ್ದು, ಇದೀಗ ಕೇಂದ್ರ ಸರ್ಕಾರವು ದುರುದ್ದೇಶದಿಂದ ವಕ್ಫ್ ಆಸ್ತಿಗಳನ್ನು ಕಬಳಿಸುವ ಸಲುವಾಗಿ ವಕ್ಫ್ ಬೋರ್ಡ್‌ನ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ಇದು ಜಾತ್ಯತೀತ ಮೌಲ್ಯಗಳ ವಿರುದ್ಧವಾಗಿರುವ ಈ ಮಸೂದೆ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ: ಜಿಲ್ಲಾಡಳಿತದಿಂದ ಶಾಂತಿ ಸಭೆ

Advertisements

ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಅಧ್ಯಕ್ಷ ಅಂಗಡಿ ಚಂದ್ರು, ಎಸ್‌ಡಿಪಿಐ ಜಿಲ್ಲಾ ಮುಖಂಡರಾದ ಅಝ್ಮತ್ ಪಾಷ, ಅತೀಖ್, ಎಐಎಂಡಿಎಫ್‌ನ ರಾಜ್ಯಾಧ್ಯಕ್ಷ ನಾಸೀರ್ ಅಹಮದ್, ಧರ್ಮ ಗುರು ಮೌಲಾನ ಯೂನುಸ್ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ ಪಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯ ಮುಸ್ತಫಾ ಆಲ್ದೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಆರೀಫ್, ಅಜ್ಞಾನ್ ಆಲ್ದೂರು, ಗ್ರಾಮ ಸಮಿತಿ ಅಧ್ಯಕ್ಷ ಮನ್ಸೂರ್, ಮುಸ್ಲಿಂ ಧರ್ಮ ಗುರುಗಳು ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X