ಚಿಕ್ಕಮಗಳೂರು | ಪ್ರಾಣ ಬಿಟ್ಟೇವು, ಭೂಮಿ ಬಿಡಲ್ಲ: ದಲಿತ ನಿವಾಸಿಗಳ ಅಳಲು

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಕಾಲೋನಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬದ ಮೂಲ ನಿವಾಸಿಗಳು ಇಲ್ಲಿ ವಾಸವಾಗಿದ್ದಾರೆ.

Screenshot 2024 11 21 12 22 29 85 a49c29324e15581d7b6335d31382dfc2 1

ಬೆಳವಣಿಗೆಯಾದಂತೆ ಕುಟುಂಬದ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಾಗಿದೆ. ಇದರಿಂದ ಮೇಲನಹಳ್ಳಿ ಕಾಲೋನಿಯ ಜನರು ಸರ್ವೇ ನಂ.22ರಲ್ಲಿ 20 ಎಕ್ಕರೆ 16 ಗುಂಟೆ ಸರ್ಕಾರದ ಬೀಳು ಬಿದ್ಧ ಜಾಗದಲ್ಲಿ 5 ಎಕರೆಗೆ ಸೀಮಿತವಾಗಿ ಒಂದು ವರ್ಷದಿಂದ 58 ಕುಟುಂಬಸ್ಥರು ಗುಡಿಸಲು ನಿರ್ಮಿಸಿಕೊಂಡಿದ್ದರು.

ವಸತಿರಹಿತರು 58 ಗುಡಿಸಲು ನಿರ್ಮಿಸಿದ್ದರು. ಇವು ಅನಧಿಕೃತ ಗುಡಿಸಿಲು ಎಂದು ಆರೋಪಿಸಿ ಬಂದ ದೂರು ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ನೆರವಿನೊಂದಿಗೆ ಕಂದಾಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

Advertisements
Screenshot 2024 11 21 12 14 20 71 965bbf4d18d205f782c6b8409c5773a4

ಈ ಜಾಗದಲ್ಲಿ ಬೇರೆ ಬೇರೆ ತಾಲೂಕಿನಿಂದ ಜನರು ಬಂದು ಬೆಳೆ ಹಾಗೂ ತೋಟ ಮಾಡಿಕೊಂಡಿದ್ದಾರೆ. ನಾವು ಅಂಗೈಯಷ್ಟು ಜಾಗದಲ್ಲಿ ತಮಗೆ ಬದುಕು ಕಟ್ಟಿಕೊಳ್ಳಲು ಗುಡಿಸಲು ನಿರ್ಮಾಣ ಮಾಡಿಕೊಂಡಿರುವುದನ್ನು ದ್ವಂಸಗೊಳಿಸಿದರು.

“ನಾವು ಕೂಲಿ ಮಾಡಿ ಹೊಟ್ಟೆಬಟ್ಟೆ ಕಟ್ಟಿ ಮಕ್ಕಳನ್ನು ಸಾಕುತ್ತ ಜೀವನ ನಡೆಸುತ್ತಿದ್ದೇವೆ. ನಮ್ಮ ಕಷ್ಟ ಮುಗಿಲು ಮುಟ್ಟಿದೆ. ಒಂದು ಚಿಕ್ಕ ಮನೆಯಲ್ಲಿ 3ರಿಂದ 4 ಕುಟುಂಬದವರು ವಾಸ ಮಾಡುತ್ತಿದ್ದಿವಿ, ನಾವು ಗುಡಿಸಲು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆವು. ನಾವೆಲ್ಲ ಕೂಲಿ ಕೆಲಸಕ್ಕೆ ಹೋಗಿರುವ ಸಮಯದಲ್ಲಿ ಅಧಿಕಾರಿಗಳು ಜೆಸಿಬಿಯಿಂದ ಗುಡಿಸಲು ಕೆಡವಿದ್ದಾರೆ. ಗುಡಿಸಲಲ್ಲಿದ್ದ ಆಹಾರ ಪದಾರ್ಥಗಳು, ಅಡುಗೆ ಪಾತ್ರೆಗಳು, ಹಾಸಿಗೆ ಹಾಗೂ ನಮ್ಮ ವಸ್ತುಗಳ ಸಮೇತ ಗುಡಿಸಲುಗಳನ್ನು ನಾಶಪಡಿಸಿದ್ದಾರೆ” ಎಂದು ಮೇಲನಹಳ್ಳಿ ಗ್ರಾಮಸ್ಥರು ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.

Screenshot 2024 11 21 12 11 48 07 965bbf4d18d205f782c6b8409c5773a4

“ಹೆಂಗಸರು, ಮಕ್ಕಳು ಅಧಿಕಾರಿಗಳ ಕಾಲಿಗೆ ಬಿದ್ದು ಅಂಗಲಾಚಿದರೂ ಯಾವುದೇ ಕರುಣೆ ತೋರದೆ ನಿರ್ದಾಕ್ಷಿಣ್ಯವಾಗಿ ಗುಡಿಸಲನ್ನು ನೆಲಸಮಗೊಳಿಸಿದರು” ಎಂದು ಗ್ರಾಮಸ್ಥರು ಕಣ್ಣೀರಿಟ್ಟರು.

“ಈ ಜಾಗಕ್ಕಾಗಿ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿರುವ ರೈತರು ಮತ್ತು ಇದೇ ಗ್ರಾಮದ ಪರಿಶಿಷ್ಟ ಜಾತಿಯ ನಿವೇಶನ ರಹಿತರ ನಡುವೆ ಈಗ ಪೈಪೋಟಿ ಆರಂಭವಾಗಿದೆ. ನಿವೇಶನ ರಹಿತರನ್ನು ಪಟ್ಟಿ ಮಾಡಲು ಸೂಚಿಸಲಾಗಿದೆ. ಪರಿಶೀಲನೆಯ ಬಳಿಕ ವಸತಿ ಕಲ್ಪಿಸಲು ಕ್ರಮ ವಹಿಸಲಾಗುವುದು. ಇದೇ ಜಮೀನಿಗೆ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿರುವ ರೈತರ ಅರ್ಜಿಗಳನ್ನು ಬಗರ್ ಹುಕುಂ ಸಮಿತಿ ಮುಂದೆ ಇರಿಸಲಾಗುವುದು. ಭೂಮಿ ಮಂಜೂರು ಮಾಡುವುದು ಅಥವಾ ತಿರಸ್ಕರಿಸುವುದು ಸಮಿತಿ ತೀರ್ಮಾನ. ಸದ್ಯಕ್ಕೆ ಈ ಭೂಮಿ ಕಂದಾಯ ಇಲಾಖೆ ಸುಪರ್ದಿಯಲ್ಲಿ ಇರಲಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Screenshot 2024 11 21 12 12 41 61 965bbf4d18d205f782c6b8409c5773a4

ಗುಡಿಸಲು ನಿರ್ಮಿಸಿಕೊಂಡಿದ್ದ ನಿವಾಸಿಗಳು ಪೋಲಿಸರನ್ನು ಕಂಡ ಕೂಡಲೇ, “ಸ್ವಾಮಿ ನಮಗೆ ಮನೆಯಿಲ್ಲ. ಇದೇ ಮನೆ ದಯಮಾಡಿ ಗುಡಿಸಲು ಉರುಳಿಸಬೇಡಿ. ಎಂಟು ಸಾವಿರ ಸಾಲ ಮಾಡಿ ಇಂಥ ಪುಟ್ಟ ಗುಡಿಸಲನ್ನು ಕಟ್ಟಿಕೊಂಡಿದ್ದೇನೆ ನಮ್ಮ ಬದುಕನ್ನು ಬೀದಿಗೆ ತರಬೇಡಿ” ಎಂದು ಅಂಗಲಾಚುತ್ತಿದ್ದ ದೃಶ್ಯ ಮನಮಿಡಿಯುವಂತಿತ್ತು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಡಿ.14ರಂದು ಲೋಕ ಅದಾಲತ್: ಸಿವಿಲ್ ನ್ಯಾಯಾಧೀಶ ವೀರಭದ್ರಯ್ಯ

ಒಟ್ಟಾರೆ ಮೇಲನಹಳ್ಳಿ ಕಾಲೋನಿಯ ದಲಿತ ಸಮುದಾಯಕ್ಕೆ ಸೇರಿದ ವಸತಿರಹಿತರ 58 ಕುಟುಂಬಸ್ಥರಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ಇವರ ಸಮಸ್ಯೆ ಆಲಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಬೇಕು ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X