ಚಿಕ್ಕನಾಯಕನಹಳ್ಳಿ | ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ‘ಸಂಸತ್‌’ ಚುನಾವಣೆ; ನೂತನ ಮಂತ್ರಿಮಂಡಲ ರಚನೆ

Date:

Advertisements

ಚಿಕ್ಕನಾಯಕನಹಳ್ಳಿ ತಾಲೂಕಿನ ಮೇಲನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆಯು ಇತ್ತೀಚೆಗೆ ನಡೆಸಲಾಯಿತು.

ಶಾಲಾ ವಿದ್ಯಾರ್ಥಿಗಳ ಈ ಸಂಸತ್ ಚುನಾವಣೆಯು ದೇಶದ ಲೋಕಸಭಾ ಚುನಾವಣೆಯ ರೀತಿ ನೀತಿಗಳ ಮಾದರಿಯಲ್ಲೇ ಶಾಲಾ ಸಂಸತ್ ಚುನಾವಣೆಯು ನಡೆಯಿತು. ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಘೋಷಣೆಯೂ ಆಯಿತು. ನಂತರ ಪ್ರಮಾಣವಚನ, ಪದಗ್ರಹಣ ಕಾರ್ಯಕ್ರಮಗಳೂ ನಡೆದವು.

ಈ ಸಂದರ್ಭದಲ್ಲಿ ಶಾಲಾ ಸಂಸತ್ ಕುರಿತು ಮಾತನಾಡಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಎನ್ ಸತೀಶ್, “ಶಾಲಾ ಸಂಸತ್ ಚುನಾವಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಬಿತ್ತುವುದು ಇದರ ಮುಖ್ಯ ಉದ್ದೇಶ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ವಿದ್ಯಾರ್ಥಿಗಳ ನಾಯಕತ್ವದಲ್ಲೇ ಶಾಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವುದೇ ಶಾಲಾ ಸಂಸತ್ತಿನ ಮೂಲ ಆಶಯ” ಎಂದರು.

Advertisements

ಶಾಲಾ ಸಂಸತ್ತಿನ ನೂತನ ಮಂತ್ರಿಮಂಡಲದಲ್ಲಿ ರಾಷ್ಟ್ರಪತಿಯಾಗಿ ಚಿನ್ಮಯಿ, ಪ್ರಧಾನ ಮಂತ್ರಿಯಾಗಿ ಚೇತನ್ ಎಮ್ ಡಿ, ಶಿಕ್ಷಣ ಮಂತ್ರಿಯಾಗಿ ಚೇತನ್, ಆರೋಗ್ಯ ಮಂತ್ರಿಯಾಗಿ ಐಶ್ವರ್ಯಾ, ಕ್ರೀಡಾ ಮಂತ್ರಿಯಾಗಿ ಹರ್ಷವರ್ಧನ್, ಸಾ‌ಹಿತ್ಯ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಚಿಂತನ, ಮಕ್ಕಳ ಕಲ್ಯಾಣ ಮಂತ್ರಿಯಾಗಿ ರಶ್ಮಿ ಕೆ ಆರ್, ಆಹಾರ ಖಾತೆ ಮಂತ್ರಿಯಾಗಿ ನಾಗವೇಣಿ, ಗೃಹ ಮಂತ್ರಿಯಾಗಿ ಶರತ್, ತೋಟಗಾರಿಕೆ ಮತ್ತು ನೀರಾವರಿ ಮಂತ್ರಿಯಾಗಿ ಶ‌ಹಬಾಝ್ ಆಯ್ಕೆಯಾದರು.

ಶಾಲಾ ಸಂಸತ್ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳಾಗಿ ಪ್ರಾಧ್ಯಾಪಕರಾದ ಭಗತ್ ಸಿಂಗ್ ಹಾಗೂ ಕೆ.ಟಿ. ದಾದಾ ಹಯಾತ್ ಕಾರ್ಯನಿರ್ವಹಿಸಿದರು. ಚುನಾವಣೆಯ ಸಂಭ್ರಮದಲ್ಲಿ ಶಾಲಾ ಸಿಬ್ಬಂದಿಗಳಾದ ನಾಗರಾಜ್ ‌ಸಿ, ಸತೀಶ್ ಟಿ.ಆರ್, ನಾರಾಯಣಪ್ಪ ಎನ್, ಭಾಗ್ಯಮ್ಮ, ಮಹಾದೇವಿ, ಪಲ್ಲವಿ, ಲಿಂಗರಾಜು, ಹರೀಶ್ ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X