ಚಿಕ್ಕಮಗಳೂರು | ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರು ಸಾವು

Date:

  • ಮೀನು ಹಿಡಿದು ತಂದು ಸಾಕುವ ಬಗ್ಗೆ ಮಾತನಾಡಿಕೊಂಡಿದ್ದ ಸಹೋದರರು
  • ನಾಲ್ಕು ತಿಂಗಳ ಹಿಂದೆ ರೋಹಿತ್‌ನ ತಮ್ಮ ಶಾಲಾ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ

ಆಕಸ್ಮಿಕವಾಗಿ ಕೆರೆಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಕುಂಟಿನಮಡು ಗ್ರಾಮದಲ್ಲಿ ನಡೆದಿದೆ.

- Advertisement -

ಯಶವಂತ (10), ರೋಹಿತ್ (6) ಮೃತಪಟ್ಟ ಬಾಲಕರು. ಕುಂಟಿನಮಡು ಗ್ರಾಮ ಸಮೀಪದ ಕೆರೆ ಬಳಿ ಹೋಗಿದ್ದ ಬಾಲಕರು ಆಯತಪ್ಪಿ ಬಿದ್ದು ಭಾನುವಾರ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಶಶಿಧರ ಮತ್ತು ಪುಷ್ಪಾ ದಂಪತಿಯ ಪುತ್ರ ಯಶವಂತ, ಶಶಿಧರ ಅವರ ಸಹೋದರ ಹರೀಶ್ ಮತ್ತು ಸೌಮ್ಯ ದಂಪತಿಯ ಮಗ ರೋಹಿತ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶಶಿಧರ್ ಎಂದಿನಂತೆ ತೋಟಕ್ಕೆ ತೆರಳಿದ್ದರು. ಈ ವೇಳೆ ಅವರನ್ನೇ ಹಿಂಬಾಲಿಸಿಕೊಂಡು ಐದನೇ ತರಗತಿ ಓದುತ್ತಿದ್ದ ಯಶವಂತ್ ಹಾಗೂ ಈ ವರ್ಷ ಒಂದನೇ ತರಗತಿಗೆ ದಾಖಲಾತಿ ಪಡೆಯಬೇಕಿದ್ದ ರೋಹಿತ್ ಸೈಕಲ್‌ನಲ್ಲಿ ಸಾಗಿದ್ದಾರೆ.

ಊರಿನ ಹೊರಭಾಗದ ಕೆರೆಯಲ್ಲಿ ಮಕ್ಕಳು ಆಕಸ್ಮಿಕವಾಗಿ ಮುಳುಗಿದ್ದಾರೆ. ಕೆರೆಯಲ್ಲಿ ಮುಳುಗುತ್ತಿರುವ ಮಕ್ಕಳನ್ನು ನೋಡಿದ ಸ್ಥಳೀಯರೊಬ್ಬರು ತಕ್ಷಣ ಗ್ರಾಮಸ್ಥರಿಗೆ ಮಾಹಿತಿ ನೀಡಿ ನೀರಿಗೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದರು.

ಇಬ್ಬರು ಮಕ್ಕಳನ್ನು ಕೆರೆಯಿಂದ ಹೊರ ತೆಗೆಯುವಾಗ ರೋಹಿತ್‌ನ ಉಸಿರು ಅದಾಗಲೇ ನಿಂತಿತ್ತು. ಯಶವಂತ್‌ನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗ ಮಧ್ಯೆ ಆತನೂ ಮೃತಪಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಚಾರ್ಮಾಡಿ ಘಾಟಿಯಲ್ಲಿ ಟ್ರೆಕ್ಕಿಂಗ್‌ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಭಾನುವಾರ ಬೆಳಗ್ಗೆಯೇ ಮನೆಯಲ್ಲಿ ಯಶವಂತ್ ಮತ್ತು ರೋಹಿತ್ ಮೀನು ಸಾಕುವ ಬಗ್ಗೆ ಮಾತನಾಡಿದ್ದರು. ಮೀನನ್ನು ಹಿಡಿದು ತಂದು ಮನೆಯಲ್ಲಿ ಸಾಕುವ ಬಗ್ಗೆ ಮಾತನಾಡಿಕೊಂಡು ತಂದೆಯನ್ನು ಹಿಂಬಾಲಿಸಿಕೊಂಡು ಸೈಕಲ್‌ನಲ್ಲಿ ಕೆರೆಗೆ ತೆರಳಿ ಮೀನು ಹಿಡಿದು ತರುವ ಪ್ರಯತ್ನ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ನಾಲ್ಕು ತಿಂಗಳ ಹಿಂದೆ ರೋಹಿತ್ ತಮ್ಮ ಒಂದೂವರೆ ವರ್ಷದ ಭುವನ್ ಹೊಸದುರ್ಗ ತಾಲೂಕಿನ ದೊಡೇನಪಾಳ್ಯದಲ್ಲಿ ಶಾಲಾ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ, ಆದಾಗಿ ಕೆಲವೇ ದಿನಗಳ ಅಂತರದಲ್ಲಿ ಮತ್ತಿಬ್ಬರು ಮಕ್ಕಳು ಮೃತಪಟ್ಟಿದ್ದರಿಂದ ಕುಟುಂಬದವರ ಆಘಾತಕ್ಕೆ ಒಳಗಾಗಿದ್ದಾರೆ. ಮಕ್ಕಳ ಮೃತದೇಹ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...