ಚಿಕ್ಕಮಗಳೂರು | ಮತ್ತೆ ಮುನ್ನೆಲೆಗೆ ಬಾಬಾ ಬುಡನ್‌ಗಿರಿ ವಿವಾದ

Date:

Advertisements

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಬಾಬುಡನ್‌ ಗಿರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಧರ್ಮಾತೀತವಾಗಿ ಹಿಂದು-ಮುಸ್ಲಿಮರು ಪೂಜೆ ಸಲ್ಲಿಸುತ್ತಿದ್ದ ಬಾಬಾ ಬುಡನ್‌ಗಿರಿಯ ದರ್ಗಾವನ್ನು ದತ್ತಪೀಠವೆಂದು ಕರೆದು ಹಿಂದುತ್ವವಾದಿ ಸಂಘಟನೆಗಳು ಕೋಮು ವಿವಾದ ಹಚ್ಚಿವೆ. ಅಲ್ಲದೆ, ವರ್ಷಕ್ಕೊಮ್ಮೆ ಅಲ್ಲಿ ದತ್ತ ಜಯಂತಿ ಆಚರಿಸುತ್ತಿವೆ. ಇದೀಗ, ದತ್ತ ಜಯಂತಿಗೆ ಎರಡು ತಿಂಗಳು ಬಾಕಿ ಇರುವಾಗಲೇ, ಶ್ರೀರಾಮಸೇನೆ ಮತ್ತೆ ವಿವಾದವನ್ನು ಮುನ್ನೆಲೆಗೆ ತಂದಿದೆ.

ಬಾಬಾಬುಡನ್‌ ಗಿರಿಯಲ್ಲಿರುವ ಗೋರಿಗಳನ್ನು ಸ್ಥಳಾಂತರಿಸುವಂತೆ ಶ್ರೀರಾಮಸೇನೆ ಒತ್ತಾಯಿಸಿದೆ. ಗೋರಿಗಳ ಸ್ಥಳಾಂತರಕ್ಕೆ ಆಗ್ರಹಿಸಿ ಅಕ್ಟೋಬರ್​​​ 30ರಿಂದ ನವೆಂಬರ್​​​ 3ರವರೆಗೆ ದತ್ತಮಾಲಾ ಅಭಿಯಾನ ನಡೆಸುವುದಾಗಿ ಶ್ರೀರಾಮಸೇನೆ ಹೇಳಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಬಬುಡನ್ ಗಿರಿ ದರ್ಗಾಗೆ ಎಂಟು ಮಂದಿಯುಳ್ಳ ವ್ಯವಸ್ಥಾಪನ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯ ಸದಸ್ಯರಲ್ಲಿ ಏಳು ಮಂದಿ ಹಿಂದುಗಳೇ ಆಗಿದ್ದರು. ಅವರ ಹಿಂದುತ್ವವಾದಿ ಸಂಘಟನೆಗಳ ಪರವಾಗಿದ್ದಾರೆ. ಅವರದ್ದೇ ನೇತೃತ್ವದಲ್ಲಿ ಕಳೆದ ವರ್ಷ ದತ್ತ ಜಯಂತಿಯೂ ನಡೆದಿದೆ. ಆದರೆ, ಸಮಿತಿಯಲ್ಲಿ ಒಬ್ಬರು ಮಾತ್ರವೇ ಮುಸ್ಲಿಂ ಸಮುದಾಯದವರಿದ್ದು, ಸಮಿತಿ ಕೂಡ ಬಾಬಾಬುಡನ್‌ ಗಿರಿಯನ್ನು ದತ್ತಪೀಠ ಮಾಡಲು ಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

Advertisements

ಅಲ್ಲದೆ, ಕಳೆದ ವರ್ಷ ದತ್ತಜಯಂತಿಯಲ್ಲಿ ಮಾತ್ರ ಹಿಂದೂ ಅರ್ಚಕರಿಗೆ ಅವಕಾಶ ನೀಡಬೇಕೆಂದು ಕೋರ್ಟ್‌ ಹೇಳಿತ್ತು. ಆದರೆ, ನಿತ್ಯವೂ ಹಿಂದು ಅರ್ಚಕರು ಪೂಜೆ ಸಲ್ಲಿಸುತ್ತಿದ್ದಾರೆ. ಹೀಗಾಗಿ, ಹಿಂದು ಅರ್ಚಕರನ್ನು ವಜಾಗೊಳಿಸಬೇಕು. ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಸೈಯದ್​ ಬುಡೇನ್ ಶಾ ಖಾದ್ರಿ ಟ್ರಸ್ಟ್ ಮನವಿ ಮಾಡಿದೆ. ಈ ಬೆನ್ನಲ್ಲೇ ಬಾಬಾಬುಡನ್‌ಗಿರಿಯಲ್ಲಿ ಮತ್ತೆ ವಿವಾದವನ್ನು ಶ್ರೀರಾಮಸೇನೆ ಮುನ್ನೆಲೆಗೆ ತರಲು ಯತ್ನಿಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X