ಚಿಕ್ಕಮಗಳೂರು | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 28ಕ್ಕೆ ಬೃಹತ್‌ ಪ್ರತಿಭಟನಾ ಸಮಾವೇಶ

Date:

Advertisements
  • 94 ಸಿ, 94 ಸಿಸಿ – ಅರ್ಹ ಫಲಾನುಭವಿಗಳಿಗೆ ಕೂಡಲೆ ಹಕ್ಕು ಪತ್ರ ವಿತರಿಸಿ
  • ನಿವೇಶನ ಹಂಚಿಕೆ ಮಾಡಿ; ಮಲೆನಾಡು ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಿ

ʼಭೂಮಿ ವಸತಿ ಕೊಡದೆ ನಮ್ಮ ಓಟು ಕೊಡೆವು, ಅರಣ್ಯ ಹಕ್ಕು ಸಿಗದೆ ನಮ್ಮ ಓಟು ಕೊಡೆವುʼ ಎಂಬ ಘೋಷ ವಾಕ್ಯದೊಂದಿಗೆ ಮಾರ್ಚ್‌ 28ರಂದು ಚಿಕ್ಕಮಗಳೂರಿನಲ್ಲಿ ರೈತ, ದಲಿತ, ಕೂಲಿಕಾರ್ಮಿಕ ಸಂಘಟನೆಗಳ ವತಿಯಿಂದ ಜನಜಾಗೃತಿ ಜಾಥಾ ಮತ್ತು ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ.

‘ಚುನಾವಣೆ ಹಿನ್ನೆಲೆ ರಾಜಕಾರಣಿಗಳ ವಿನಮ್ರತೆಯ ನಾಟಕ ಪ್ರಾರಂಭವಾಗಲಿದೆ. ಈ ಬಾರಿ ಮಲೆನಾಡಿಗರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕಾಗಿದೆ. ಬೇಡಿಕೆಗಳನ್ನು ಈಡೇರಿಸದ ಹೊರತು ನಮ್ಮ ಮತ ನೀಡುವುದಿಲ್ಲ’ ಎಂದು ಪ್ರತಿಭಟನೆಗೆ ಕರೆ ನೀಡಿರುವ ರೈತ, ದಲಿತ ಮತ್ತು ಕೂಲಿಕಾರ್ಮಿಕ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗೆದ್ದು ಹೋದವರು ನಮ್ಮತ್ತ ತಿರುಗಿ ನೋಡಿದ್ದಾರೆಯೇ? ಬಡ ಜನರಿಗೆ ಸೂರು ಸಿಕ್ಕಿದೆಯೆ? ಅರಣ್ಯ ಕಾಯಿದೆಗಳ ಭಯದಿಂದ ನಮಗೆ ಮುಕ್ತಿ ಸಿಕ್ಕಿದೆಯಾ? ಕನಿಷ್ಟ ಒಂದು ಒಳ್ಳೆಯ ಸರ್ಕಾರಿ ಆಸ್ಪತ್ರೆಯಾದರೂ ಇದೆಯಾ? ಹೀಗಿರುವಾಗ ನಾವು ಅವರಿಗೆ ಏಕೆ ಮತ ಹಾಕಬೇಕು” ಎಂದು ಪ್ರಶ್ನಿಸಿದ್ದಾರೆ.

Advertisements

ವಸತಿ ಹಕ್ಕಿಗಾಗಿ 94 ಸಿ, 94 ಸಿಸಿ ಅಡಿಯಲ್ಲಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದು, ಅರ್ಹ ಫಲಾನುಭವಿಗಳಿಗೆ ಕೂಡಲೆ ಹಕ್ಕು ಪತ್ರ ವಿತರಿಸಬೇಕು. ಗ್ರಾಮ ಪಂಚಾಯಿತಿಗಳು ನಿವೇಶನಗಳಿಗೆ ಮೀಸಲಿಟ್ಟಿರುವ ಜಾಗಗಳನ್ನು ಕೂಡಲೆ ನಿವೇಶನ ರಹಿತರನ್ನು ಗುರುತಿಸಿ ವಂಚಿತರಿಗೆ ಹಂಚಿಕೆ ಮಾಡಿ, ಮನೆಗಳನ್ನು ನಿರ್ಮಿಸಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಕೈ ತಪ್ಪುವ ಭೀತಿ; ಸಿದ್ದರಾಮಯ್ಯ ಭೇಟಿ ಮಾಡಿದ ಕೈ ಮುಖಂಡರು

“ಬದುಕಿಗಾಗಿ ವ್ಯವಸಾಯ ಮಾಡುತ್ತಿರುವ ಮಲೆನಾಡಿನ ರೈತರ ಸಾಗುವಳಿ ಭೂಮಿಗೆ ಹಕ್ಕು ಪತ್ರ ನೀಡಬೇಕು. ಮಲೆನಾಡಿನ ರೈತಾಪಿ ವರ್ಗವನ್ನು ಬಾದಿಸುತ್ತಿರುವ ತೊಂಡೆರೋಗ, ಕೊಳೆ ರೋಗ, ಎಲೆಚುಕ್ಕಿ ರೋಗದ ಬಗ್ಗೆ ಸಂಶೋಧನೆಗಳು ತೀವ್ರಗೊಳಿಸಿ, ಬಾಧಿತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕೂಲಿಕಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಪರಿಸರ ಸ್ನೇಹಿ ಸಾರ್ವಜನಿಕ ಹಿತಾಸಕ್ತಿಯ ಅಭಿವೃದ್ಧಿಗಾಗಿ ಹಾಗೂ ಭೂಮಿ, ವಸತಿ ಸಮಸ್ಯೆ ಬಗೆಹರಿಸಲು ತೊಡಕಾಗಿರುವ ಸೆಕ್ಷನ್‌ 4, 1 ಮತ್ತು ಇತರೆ ಜನ ವಿರೋಧಿ ಅರಣ್ಯ ಕಾಯಿದೆಗಳನ್ನು ರದ್ದು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X