ಚಿಕ್ಕಮಗಳೂರು | ಕೆನರಾ ಬ್ಯಾಂಕ್‌ ಶಾಖೆ ಸ್ಥಳಾಂತರಿಸದಂತೆ ನಾಗರಿಕರ ಒತ್ತಾಯ

Date:

ಚಿಕ್ಕಮಗಳೂರು ನಗರದ ಕೋಟೆಯಲ್ಲಿ ಇರುವ ಕೆನರಾ ಬ್ಯಾಂಕ್ ಶಾಖೆಯನ್ನು ಎಸ್‌ಟಿಜೆ ಕಾಲೇಜಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಕೋಟೆಯ ನಾಗರಿಕರು ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಸಿಇಒ ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಸಮಾಜಿಕ ಕಾರ್ಯಕರ್ತ ಕೋಟೆ ಸೋಮಣ್ಣ ಮಾತನಾಡಿ, ಕೋಟೆ ಶಾಖೆಯಲ್ಲಿ ರೈತಾಪಿ ವರ್ಗದರು ಹೆಚ್ಚಾಗಿ ಖಾತೆದಾರರಾಗಿದ್ದಾರೆ. ಜೊತೆಗೆ ಬಡವರು, ಕೂಲಿ ಕಾರ್ಮಿಕರು, ವಯಸ್ಸಾದ ಹಿರಿಯ ಪಿಂಚಣಿ ದಾರರು ಹಾಗೂ ಸರ್ಕಾರಿ ನೌಕರರು ಈ ಶಾಖೆಯಲ್ಲಿ ಖಾತೆದಾರರಾಗಿತ್ತಾರೆ. ಕೋಟೆಗೆ ಈ ಕೆನರಾ ಬ್ಯಾಂಕ್ ಶಾಖೆ ತರಲು ಏಳು ವರ್ಷಗಳ ಹಿಂದೆ ಇದ್ದ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ್ ಮತ್ತು ಸಾಕಷ್ಟು ಮಂದಿ ಶ್ರಮ ವಹಿಸಿದ್ದಾರೆ ಎಂದು ತಿಳಿಸಿದರು.

ಬಹಳಷ್ಟು ರೈತರು ಈ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದಾರೆ, ಚಿನ್ನದ ಮೇಲಿನ ಸಾಲ ಪಡೆದಿದ್ದಾರೆ, ಸೀಕ್ರೇಟ್ ಲಾಕರ್ ಓಪನ್ ಮಾಡಿಸಿರುತ್ತಾರೆ. ಬಹಳಷ್ಟು ಹಿರಿಯ ಪಿಂಚಣಿ ದಾರರು ಇದ್ದಾರೆ, ಸಾವಿರಾರು ಖಾತೆದಾರರು ಇದ್ದಾರೆ. ಲಾಭದಾಯಕವಾದ ಈ ಬ್ಯಾಂಕ್ ಅನ್ನು ಯಾವುದೋ ಒಂದು ಕಾರಣಕ್ಕೆ ಬದಲಾವಣೆ ಮಾಡುವುದು ಸರಿಯಲ್ಲ ಎಂದರು.

ಚಿಕ್ಕಮಗಳೂರು

ಶಾಖೆ ವಿಲೀನ ಮಾಡುವುದರಿಂದ ಬಹಳಷ್ಟು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ವಿಷಯವನ್ನು ಮರು ಪರಿಶೀಲನೆ ಮಾಡಿ. ಮೇಲಾಧಿಕಾರಿಗಳು ಇದರ ಬಗ್ಗೆ ಬ್ಯಾಂಕ್‌ನ ಗ್ರಾಹಕರಿಗೆ ಒಳ್ಳೆಯ ಮತ್ತು ಆಶಾದಾಯಕ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಗರಿಕರಾದ ಕೋಟೆ ಸೋಮಣ್ಣ, ಯಶೋಧ ರವೀಂದ್ರ, ಸುಧಾಕರ್ ಗೌಡ್ರ, ಹೇಮಚಂದ್ರು, ಶಶಿ ಕುಮಾರ್, ಶಿವಣ್ಣ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...