ಚಿಕ್ಕಮಗಳೂರು | ಕೆನರಾ ಬ್ಯಾಂಕ್‌ ಶಾಖೆ ಸ್ಥಳಾಂತರಿಸದಂತೆ ನಾಗರಿಕರ ಒತ್ತಾಯ

Date:

ಚಿಕ್ಕಮಗಳೂರು ನಗರದ ಕೋಟೆಯಲ್ಲಿ ಇರುವ ಕೆನರಾ ಬ್ಯಾಂಕ್ ಶಾಖೆಯನ್ನು ಎಸ್‌ಟಿಜೆ ಕಾಲೇಜಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಕೋಟೆಯ ನಾಗರಿಕರು ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಸಿಇಒ ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಸಮಾಜಿಕ ಕಾರ್ಯಕರ್ತ ಕೋಟೆ ಸೋಮಣ್ಣ ಮಾತನಾಡಿ, ಕೋಟೆ ಶಾಖೆಯಲ್ಲಿ ರೈತಾಪಿ ವರ್ಗದರು ಹೆಚ್ಚಾಗಿ ಖಾತೆದಾರರಾಗಿದ್ದಾರೆ. ಜೊತೆಗೆ ಬಡವರು, ಕೂಲಿ ಕಾರ್ಮಿಕರು, ವಯಸ್ಸಾದ ಹಿರಿಯ ಪಿಂಚಣಿ ದಾರರು ಹಾಗೂ ಸರ್ಕಾರಿ ನೌಕರರು ಈ ಶಾಖೆಯಲ್ಲಿ ಖಾತೆದಾರರಾಗಿತ್ತಾರೆ. ಕೋಟೆಗೆ ಈ ಕೆನರಾ ಬ್ಯಾಂಕ್ ಶಾಖೆ ತರಲು ಏಳು ವರ್ಷಗಳ ಹಿಂದೆ ಇದ್ದ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ್ ಮತ್ತು ಸಾಕಷ್ಟು ಮಂದಿ ಶ್ರಮ ವಹಿಸಿದ್ದಾರೆ ಎಂದು ತಿಳಿಸಿದರು.

ಬಹಳಷ್ಟು ರೈತರು ಈ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದಾರೆ, ಚಿನ್ನದ ಮೇಲಿನ ಸಾಲ ಪಡೆದಿದ್ದಾರೆ, ಸೀಕ್ರೇಟ್ ಲಾಕರ್ ಓಪನ್ ಮಾಡಿಸಿರುತ್ತಾರೆ. ಬಹಳಷ್ಟು ಹಿರಿಯ ಪಿಂಚಣಿ ದಾರರು ಇದ್ದಾರೆ, ಸಾವಿರಾರು ಖಾತೆದಾರರು ಇದ್ದಾರೆ. ಲಾಭದಾಯಕವಾದ ಈ ಬ್ಯಾಂಕ್ ಅನ್ನು ಯಾವುದೋ ಒಂದು ಕಾರಣಕ್ಕೆ ಬದಲಾವಣೆ ಮಾಡುವುದು ಸರಿಯಲ್ಲ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಚಿಕ್ಕಮಗಳೂರು

ಶಾಖೆ ವಿಲೀನ ಮಾಡುವುದರಿಂದ ಬಹಳಷ್ಟು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ವಿಷಯವನ್ನು ಮರು ಪರಿಶೀಲನೆ ಮಾಡಿ. ಮೇಲಾಧಿಕಾರಿಗಳು ಇದರ ಬಗ್ಗೆ ಬ್ಯಾಂಕ್‌ನ ಗ್ರಾಹಕರಿಗೆ ಒಳ್ಳೆಯ ಮತ್ತು ಆಶಾದಾಯಕ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಗರಿಕರಾದ ಕೋಟೆ ಸೋಮಣ್ಣ, ಯಶೋಧ ರವೀಂದ್ರ, ಸುಧಾಕರ್ ಗೌಡ್ರ, ಹೇಮಚಂದ್ರು, ಶಶಿ ಕುಮಾರ್, ಶಿವಣ್ಣ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...