ಚಿಕ್ಕಮಗಳೂರು | ಕರ್ತವ್ಯ ಲೋಪ ಆರೋಪ; ಜಿಲ್ಲಾ ವಕ್ಫ್‌ಬೋರ್ಡ್ ಅಧಿಕಾರಿ ಅಮಾನತು

Date:

Advertisements

ಕರ್ತವ್ಯ ಲೋಪ ಎಸಗಲಾಗಿದೆ ಎನ್ನುವ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ವಕ್ಫ್‌ಬೋರ್ಡ್‌ ಅಧಿಕಾರಿಯನ್ನು ಅಮಾನತು ಮಾಡಿ ರಾಜ್ಯ ವಕ್ಫ್‌ಬೋರ್ಡ್‌ ಕಾರ್ಯ ನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಾಮಿಯಾ ಮಸೀದಿ ಹಾಗೂ ನಲ್ಲೂರು ಮಠ ನಡುವಿನ ವಿವಾದಿತ ಬಡಾ ಮಕಾನ್ ಜಾಗದಲ್ಲಿದ್ದ ಕಟ್ಟಡ ತೆರವು ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಿಲ್ಲ ಹಾಗೂ ಪೊಲೀಸ್‌ ಭದ್ರತೆ ಪಡೆದಿರುವುದಿಲ್ಲ. ಜತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿ ನಡೆದುಕೊಳ್ಳಲಾಗಿದೆ ಎಂದು ಆರೋಪಿಸಿ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಸತಾರ್‌ ಹುಸೇನಿ ಅವರನ್ನು ಅಮಾನತುಗೊಳಿಸಲಾಗಿದೆ.

ನಗರದ ಜಾಮೀಯಾ ಮಸೀದಿಗೆ ಸೇರಿದ್ದು ಎನ್ನಲಾದ ಬಡಾ ಮಕಾನ್ ವಕ್ಫ್ ಆಸ್ತಿಯಲ್ಲಿ ಎನ್.ಎಂ.ಕಮಲಮ್ಮ ಹಾಗೂ ಇತರರು ಮತ್ತು ವಕ್ಫ್ ಮಂಡಳಿ ಹಾಗೂ ಜಾಮಿಯಾ ಮಸೀದಿ ಆಡಳಿತ ಸಮಿತಿ ಮಧ್ಯೆ ನ್ಯಾಯಾಲಯಲ್ಲಿ ವಿವಾದ ನಡೆಯುತ್ತಿದೆ. ಈ ಮಧ್ಯೆ ಹೈಕೋರ್ಟ್ ಆದೇಶದನ್ವಯ ಇತ್ತೀಚೆಗೆ ವಕ್ಫ್ ಬೋರ್ಡ್ ಜಿಲ್ಲಾ ಅಧಿಕಾರಿ ಸೈಯದ್ ಸತ್ತಾರ್ ಹುಸೇನಿ ನೇತೃತ್ವದದಲ್ಲಿ ಬಡಾ ಮಕಾನ್ ಜಾಗದಲ್ಲಿದ್ದ ಕಟ್ಟಡ ತೆರವು ಮಾಡಲಾಗಿತ್ತು. ಈ ತೆರವು ಕಾರ್ಯಾಚರಣೆ ವಿರುದ್ಧ ಕೆಲ ಸಂಘಟನೆಗಳು ದೂರು ನೀಡಿದ್ದವು.

Advertisements

ಇದನ್ನೂ ಓದಿ: ಕೊಡಗು, ಹಾಸನ, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಈಶ್ವರ ಖಂಡ್ರೆ

ಈ ಹಿನ್ನೆಲೆ ತೆರವು ಪೂರ್ವದಲ್ಲಿ ನಗರಸಭೆ ಆಯುಕ್ತರಿಗೆ ಮಾಹಿತಿ ನೀಡಿಲ್ಲ, ಪೊಲೀಸ್ ಠಾಣೆಗೆ ಬಂದೋಬಸ್ತ್ ಒದಗಿಸಲು ಮಾಹಿತಿ ನೀಡಿಲ್ಲ. ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸದೆ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಯ ಬೇಜವಾಬ್ದಾರಿಯಿಂದ ವಿವಾದಿತ ಸ್ಥಳದಲ್ಲಿ ಪ್ರಕ್ಷಿಬ್ಧ ವಾತಾವರಣ ಉಂಟಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X