ಚಿಕ್ಕಮಗಳೂರು | ಕರ್ತವ್ಯ ಲೋಪ ಆರೋಪ; ಜಿಲ್ಲಾ ವಕ್ಫ್‌ಬೋರ್ಡ್ ಅಧಿಕಾರಿ ಅಮಾನತು

Date:

ಕರ್ತವ್ಯ ಲೋಪ ಎಸಗಲಾಗಿದೆ ಎನ್ನುವ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ವಕ್ಫ್‌ಬೋರ್ಡ್‌ ಅಧಿಕಾರಿಯನ್ನು ಅಮಾನತು ಮಾಡಿ ರಾಜ್ಯ ವಕ್ಫ್‌ಬೋರ್ಡ್‌ ಕಾರ್ಯ ನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

ಜಾಮಿಯಾ ಮಸೀದಿ ಹಾಗೂ ನಲ್ಲೂರು ಮಠ ನಡುವಿನ ವಿವಾದಿತ ಬಡಾ ಮಕಾನ್ ಜಾಗದಲ್ಲಿದ್ದ ಕಟ್ಟಡ ತೆರವು ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಿಲ್ಲ ಹಾಗೂ ಪೊಲೀಸ್‌ ಭದ್ರತೆ ಪಡೆದಿರುವುದಿಲ್ಲ. ಜತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿ ನಡೆದುಕೊಳ್ಳಲಾಗಿದೆ ಎಂದು ಆರೋಪಿಸಿ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಸತಾರ್‌ ಹುಸೇನಿ ಅವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ನಗರದ ಜಾಮೀಯಾ ಮಸೀದಿಗೆ ಸೇರಿದ್ದು ಎನ್ನಲಾದ ಬಡಾ ಮಕಾನ್ ವಕ್ಫ್ ಆಸ್ತಿಯಲ್ಲಿ ಎನ್.ಎಂ.ಕಮಲಮ್ಮ ಹಾಗೂ ಇತರರು ಮತ್ತು ವಕ್ಫ್ ಮಂಡಳಿ ಹಾಗೂ ಜಾಮಿಯಾ ಮಸೀದಿ ಆಡಳಿತ ಸಮಿತಿ ಮಧ್ಯೆ ನ್ಯಾಯಾಲಯಲ್ಲಿ ವಿವಾದ ನಡೆಯುತ್ತಿದೆ. ಈ ಮಧ್ಯೆ ಹೈಕೋರ್ಟ್ ಆದೇಶದನ್ವಯ ಇತ್ತೀಚೆಗೆ ವಕ್ಫ್ ಬೋರ್ಡ್ ಜಿಲ್ಲಾ ಅಧಿಕಾರಿ ಸೈಯದ್ ಸತ್ತಾರ್ ಹುಸೇನಿ ನೇತೃತ್ವದದಲ್ಲಿ ಬಡಾ ಮಕಾನ್ ಜಾಗದಲ್ಲಿದ್ದ ಕಟ್ಟಡ ತೆರವು ಮಾಡಲಾಗಿತ್ತು. ಈ ತೆರವು ಕಾರ್ಯಾಚರಣೆ ವಿರುದ್ಧ ಕೆಲ ಸಂಘಟನೆಗಳು ದೂರು ನೀಡಿದ್ದವು.

ಇದನ್ನೂ ಓದಿ: ಕೊಡಗು, ಹಾಸನ, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಈಶ್ವರ ಖಂಡ್ರೆ

ಈ ಹಿನ್ನೆಲೆ ತೆರವು ಪೂರ್ವದಲ್ಲಿ ನಗರಸಭೆ ಆಯುಕ್ತರಿಗೆ ಮಾಹಿತಿ ನೀಡಿಲ್ಲ, ಪೊಲೀಸ್ ಠಾಣೆಗೆ ಬಂದೋಬಸ್ತ್ ಒದಗಿಸಲು ಮಾಹಿತಿ ನೀಡಿಲ್ಲ. ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸದೆ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಯ ಬೇಜವಾಬ್ದಾರಿಯಿಂದ ವಿವಾದಿತ ಸ್ಥಳದಲ್ಲಿ ಪ್ರಕ್ಷಿಬ್ಧ ವಾತಾವರಣ ಉಂಟಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...