ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

Date:

Advertisements

ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪಹಲ್ಗಾಮನಲ್ಲಿ ದಾಳಿಯಿಂದ 26 ಜನ ಅಮಾಯಕರು ಸಾವನ್ನಪ್ಪಿದ್ದಾರೆ.  ತುಂಬ ಸೂಕ್ಷ್ಮ ಪ್ರದೇಶವಾಗಿದ್ದರೂ ಕೂಡ ಒಂದು ಸೆಕ್ಯೂರಿಟಿ ಇಲ್ಲದಿರುವುದು ದುಖಃಕರ ಸಂಗತಿ. ಅದೇನೆ ಇರಲಿ ಈ ಘಟನೆ ನಡೆದ ತಕ್ಷಣ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವು ಪಾಕಿಸ್ತಾನ ಬೆಂಬಲಿತ ಉಗ್ರರನ್ನು ಭೇಟಿ ನೀಡಲು ಪಣ ತೊಟ್ಟಿರುವ ಮೋದಿಯವರ ಕ್ರಮ ನಿಜಕ್ಕೂ ಶ್ಲಾಘನೀಯ. ಪದೇ ಪದೇ ಭಾರತವನ್ನು ಕೆಣಕಿ ಮುಖಭಂಗವನ್ನು ಅನುಭವಿಸುತ್ತಿರುವ ಪಾಕಿಸ್ತಾನಕ್ಕೆ ಈ ಸಾರಿ, ಸರಿಯಾದ ಪಾಠವನ್ನು ಉಗ್ರರಿಗೆ ಕಲಿಸಬೇಕಾಗಿದೆ ಎಂದು ರೈತ ಮುಖಂಡ ಮಹೇಶ್ ಮಾತಾಡಿದರು.

ಭಾರತ ಸರ್ಕಾರದ ಈ ಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ನೀಡುತ್ತದೆ. ಹಾಗೆಯೇ, ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 26 ಜನರ ಅಮಾಯಕರ ಸಾವಿಗೆ ಬೇಜವಬ್ದಾರಿ ಹೇಳಿಕೆ ನೀಡಿರುವುದು ದೇಶದ ನಮ್ಮ ದೇಶದ ಭದ್ರತೆಗೆ ದಕ್ಕೆಯುಂಟುಮಾಡಿದೆ. ಕೂಡಲೆ ಸಿದ್ದರಾಮಯ್ಯನವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ರೈತ ಮುಖಂಡ ಪ್ರತಿಭಟನೆಯಲ್ಲಿ ಮಾತಾಡಿದರು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಉಗ್ರರ ದಾಳಿ, ಮೃತ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ: ಸಿಎಂ 

ಉಗ್ರರ ದಾಳಿಗೆ ಸಿಲುಕಿದ್ದ, ಪ್ರವಾಸಿಗರನ್ನು ಹಾಗೂ ಅಲ್ಲಿನ ಜನರನ್ನು ಕರೆ ತರುವಲ್ಲಿ ಸಚಿವ ಸಂತೋಷ್ ಲಾಡ್ ಬಹಳ ಶ್ರಮ ವಹಿಸಿದ್ದಾರೆ. ಇದಕ್ಕೆ ರಾಜ್ಯದ ಜನತೆ, ರೈತ ಸಂಘಟನೆ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾವತಿಯಿಂದ ಅಭಿನಂದನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯ ಸಮಿತಿಯ ಸದಸ್ಯ ಗೌಸ್ ಮೊಹಿದ್ದೀನ್ ತಿಳಿಸಿದರು. ಈ ವೇಳೆ ರೈತ ಸಂಘಟನೆ ಮುಖಂಡರು, ಹಲವು ಸಂಘಟಕರು ಹಾಗೂ ಇನ್ನಿತರರಿದ್ದರು.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X