ಚಿಕ್ಕಮಗಳೂರು | ಹಳ್ಳಕ್ಕಿಲ್ಲ ಸೇತುವೆ; ಗ್ರಾಮಸ್ಥರ ಸಂಕಷ್ಟಕ್ಕಿಲ್ಲ ಪರಿಹಾರ

Date:

Advertisements

ಹಚ್ಚ ಹಸಿರು ಮತ್ತು ಪಕೃತಿ ಸೌಂದರ್ಯದಿಂದ ಕಂಗೊಳಿಸುವ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಓರ್ಲೆ ಗ್ರಾಮಕ್ಕೆ ಯಾವ ಕಡೆಯಿಂದಲೂ ರಸ್ತಯಿಲ್ಲ, ಹಳ್ಳ ದಾಟಲು ಸೇತುವೆ ಇಲ್ಲ. ಜನರು ತಮ್ಮೂರಿನಿಂದ ಮತ್ತೊಂದು ಊರಿಗೆ ತೆರಳಲು ದಿನನಿತ್ಯ ಪರಿಪಾಟಲು ಪಡಬೇಕಾದ ಪರಿಸ್ಥಿತಿಯಿದೆ. ಮಳೆಗಾಲದಲ್ಲಂತೂ ಪರಿಸ್ಥಿತಿ ಇನ್ನೂ ಹೇಳತೀರದು.

ಗ್ರಾಮವು ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದೆ ಗ್ರಾಮದಲ್ಲಿ ಹೆಚ್ಚಾಗಿ ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಜನರು ವಾಸುತ್ತಿದ್ದಾರೆ. ಬೇಸಿಗೆಯಲ್ಲಿ ಹಳ್ಳದಲ್ಲಿ ನೀರು ಕಡಿಮೆ ಇರುತ್ತದಾದ್ದರಿಂದ ಜೀವನ ಹೇಗೂ ಸಾಗುತ್ತದೆ. ಆದರೆ, ಮಳೆಗಾಲದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತವೆ. ಆಗ, ಪಕ್ಕದೂರಿಗೆ ಹೋಗಲೂ ಕಷ್ಟ ಪಡುವಂತಾಗುತ್ತದೆ. ಸೇತುವೆ ಇಲ್ಲದೆ ದಿನಸಿ ಹಾಗೂ ಹಲವು ಸಾಮಗ್ರಿಗಳನ್ನು, ಕೃಷಿ ಯಂತ್ರೋಪಕರಣಗಳನ್ನು ಸಹ ಹೊತ್ತೊಯ್ಯಲು ಹರಸಾಹಸ ಪುಡುವಂತಾಗಿದೆ. ಪುಟ್ಟ ಮಕ್ಕಳನ್ನು ಅಂಗನವಾಡಿಗೆ ಕಳಿಸಲು ಪೋಷಕರು ಭಯ ಪಡುವಂತಾಗಿದೆ. ಗರ್ಭಿಣಿಯರು, ಬಾಣಂತಿಯರು ಹಳ್ಳ ದಾಟಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳು ಹಾಗೂ ಗ್ರಾಮದ ಜನರು ಹಳ್ಳ ದಾಟುವಾಗ ಬಿದ್ದು, ಗಾಯಗಳಾಗಿವೆ. ಆದರೂ, ಅಧಿಕಾರಿಗಳು ನಮ್ಮ ಗೋಳು ಕೇಳುತ್ತಿಲ್ಲ ಎಂದು ಗ್ರಾಮದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಳ್ಳ ಸೇತುವೆ 1

ಗ್ರಾಮದ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರ ವಾಸು ಅವರು ಈದಿನ.ಕಾಮ್ ಜೊತ ಮಾತನಾಡಿದ್ದು, “ಈ ವರ್ಷ ಅನುದಾನ ಬಿಡುಗಡೆ ಮಾಡುತ್ತೇವೆಂದು ಕ್ಷೇತ್ರದ ಶಾಸಕರು ತಿಳಿಸಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕೆಲಸ ಆರಂಭಿಸುತ್ತೇವೆ” ಎಂದು ಹೇಳಿದ್ದಾರೆ.

Advertisements

ಮುಂದಿನ ಮಳೆಗಾಲ ಬರುವಷ್ಟರಲ್ಲಿ ಈ ಗ್ರಾಮಕ್ಕೆ ಅನುದಾನ ಬಿಡುಗಡೆ ಮಾಡಿ, ಇಲ್ಲಿನ ಜನರ ಸಮಸ್ಯೆ ಆದಷ್ಟು ಬೇಗ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X