ಚಿಕ್ಕಮಗಳೂರು | ಒತ್ತುವರಿ ತೆರವು ಖಂಡಿಸಿ ಕಳಸ ಬಂದ್ ಯಶಸ್ವಿ

Date:

Advertisements

ರಾಜ್ಯ ಸರ್ಕಾರದ ಅಕ್ರಮ ಒತ್ತುವರಿ ತೆರವು ಖಂಡಿಸಿ ರೈತ ಸಂಘಟನೆಗಳು ಬುಧವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಂದ್​ಗೆ ಕರೆ ನೀಡಿತ್ತು. ಈ ಬಂದ್‌ಗೆ ಕಳಸ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಅಂಗಡಿ – ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಬಂದ್​ಗೆ ಬೆಂಬಲ ಸೂಚಿಸಿದ್ದು, ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು. ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿತ್ತು.

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಕಾಫಿ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisements

“ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆ. ಒತ್ತುವರಿ ತೆರವು ಮಾಡಿದರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ. ಕೂಡಲೇ ಅಕ್ರಮ ಒತ್ತುವರಿ ತೆರವು ಕೈಬಿಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಳಗ್ಗೆ ಅಂಗಡಿಗಳು, ಶಾಲಾ-ಕಾಲೇಜುಗಳು ಮುಚ್ಚಿದ್ದವು. ಸಂಜೆ 4ರ ನಂತರ ಅಂಗಡಿಗಳು ತೆರೆದವು. ಕಳಸೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಭಾಗವಹಿಸಿದ್ದರು. ಕಳಸ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡಲಾಯಿತು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೈಕೋರ್ಟ್ ಚೀಫ್ ಜಸ್ಟೀಸ್ ಭೇಟಿ ನೀಡಿದ್ದು, ಪ್ರತಿಭಟನಾ ಮಾರ್ಗದಲ್ಲಿ ನ್ಯಾಯಮೂರ್ತಿಗಳು ಸಾಗುವ ವೇಳೆ, “ನಮ್ಮ ನೋವು ನ್ಯಾಯಮೂರ್ತಿಗಳಿಗೂ ಗೊತ್ತಾಗಲಿ” ಎಂದು ಹೋರಾಟಗಾರರು ಘೋಷಣೆ ಕೂಗಿದರು.

‘ಮಲೆನಾಡಿನ ಕಾಫಿ ತೋಟಗಳು ಅರಣ್ಯದ ಸ್ವರೂಪದಲ್ಲೇ ಇವೆ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಸದ್ಯಕ್ಕೆ ಯಾವುದೇ ಭೂಮಿ ತೆರವು ಮಾಡದಂತೆ ಅರಣ್ಯ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ರಾಜಕೀಯ ಪ್ರೇರಿತ ವದಂತಿ ನಂಬಬಾರದು’ ಎಂದು ಶಾಸಕ ಟಿ.ಡಿ.ರಾಜೇಗೌಡ ಮನವಿ ಮಾಡಿದರು.

photo 6271620359719600987 y

‘ಅರಣ್ಯ ಅಧಿಕಾರಿಗಳು ರೈತರ ಭೂಮಿ ತೆರವು ಮಾಡುವ ಯತ್ನ ಮಾಡಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತೇನೆ’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಳಸ ತಹಶೀಲ್ದಾರ್ ಕೆ ಎಸ್‌ ದಯಾನಂದ್‌ ಹೋರಾಟ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ಹಕ್ಕೊತ್ತಾಯ ಪತ್ರವನ್ನು ಸ್ವೀಕರಿಸಿ, ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X