ಚಿಕ್ಕಮಗಳೂರು l ದನ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ 

Date:

Advertisements

ದನ ಕಳ್ಳತನ ಮಾಡಿ ಸಾಗಿಸುತ್ತಿದ್ದಾಗ ಆರೋಪಿಗಳನ್ನ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.

ಆರೋಪಿಗಳಾದ ಸಲ್ಮಾನ್ ಖಾನ್@ಸಂಪತ್ ಬಿನ್ ಅಶ್ವಕ ಖಾನ್ (21 ), ಸಾಹಿಲ್ ಬಿನ್ ಲೇಟ್ ಜಮಿಲ್ ಅಹಮ್ಮದ್ (21), ಸಯ್ಯದ ತೌಫಿಕ್ ಬಿನ್ ಸೈಯದ್ ಐಜಾಜ್ (32 ), ಅಬ್ದುಲ್ ಅಜೀಜ್ ಬಿನ್ ಅಬ್ದುಲ್ ನಜೀರ್ (34), ಅಬ್ದುಲ್ ಜಾವಾದ್ ಬಿನ್ ಅಬ್ದುಲ್ ಹಾಕ್ (22), ಪೊಲೀಸರು ಜಾನುವಾರುಗಳನ್ನು ರಕ್ಷಿಸಿದ್ದು, ಹಾಗೂ ಕೃತ್ಯಕ್ಕೆ ಬಳಸಿದ ವಾಹನ & ಮೊಬೈಲ್ ಗಳನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎನ್ನಲಾಗಿದೆ.

ಜುಲೈ 10ರಂದು ಕಳಸ ಪೊಲೀಸ್ ಠಾಣಾ ವ್ಯಾಪ್ತಿಯ ಬಲಿಗೆ ಚೆಕ್ ಪೋಸ್ಟ್ ಹತ್ತಿರ xylo ವಾಹನದಲ್ಲಿ ಐದು ಜನ ಆರೋಪಿತರು ನಾಲ್ಕು ದನಗಳನ್ನು ಸಾಗಿಸಿಕೊಂಡು ಹೋಗುತ್ತಿರುವಾಗ ಸ್ಥಳೀಯರ ಮಾಹಿತಿಯನ್ನು ಖಚಿತ ಪಡಿಸಿಕೊಂಡು ಶೋಧ ಕಾರ್ಯ ನಡೆಸಲಾಗಿದೆ. ಕಳಸ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿತರು ಕದ್ದು ಪರಾರಿಯಾಗಿದ್ದರಿಂದ ವಾಹನದಲ್ಲಿದ್ದ ನಾಲ್ಕು ದನಗಳನ್ನು ರಕ್ಷಿಸಿ ಮತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಎಲ್ಲಾ ಆರೋಪಿಗಳು ಚಿಕ್ಕಮಗಳೂರು ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ, ಹಾವೇರಿ ಜಿಲ್ಲೆ, ಚಿತ್ರದುರ್ಗ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದನಕಳ್ಳತನ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಆರೋಪಿಗಳು ಪದೇ ಪದೇ ದನಕಳ್ಳತನ ಮಾಡುವ ಪ್ರವೃತ್ತಿಯುಳ್ಳವರೆನ್ನಲಾಗಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮೂವರು ಅಂತಾರಾಷ್ಟ್ರೀಯ ಮನೆಗಳ್ಳರ ಬಂಧನ

ಠಾಣಾ ಮೊ.ನಂ: 40/2025 ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ. ಈ ಕುರಿತು ಡಾ.ವಿಕ್ರಂ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಾಲಾಜಿ ಸಿಂಗ್ ಪೊಲೀಸ್ ಉಪಾಧೀಕ್ಷಕರು ಕೊಪ್ಪ ಉಪವಿಭಾಗರವರ ನೇತೃತ್ವದಲ್ಲಿ ಕಳಸ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿಗಳಾದ  ಗಿರೀಶ, ಶಿವಕುಮಾರ, ನಿಖಿಲ್, ಸಿದ್ದಪ್ಪ ಕರಂಡಿ, ಪ್ರಮೋದ್ ಎಲ್, ಹೆಚ್ ವಿನಯ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

ಹಾವೇರಿ | ಬೇಡ್ತಿ-ವರದಾ ನದಿ ಜೋಡಣೆಗೆ ಕೇಂದ್ರ ತಾತ್ವಿಕ ಒಪ್ಪಿಗೆ: ಸಂಸದ ಬಸವರಾಜ ಬೊಮ್ಮಾಯಿ

"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ...

ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು...

Download Eedina App Android / iOS

X