ಚಿಕ್ಕಮಗಳೂರು | ಸಿಂಧೂರ ಎಂಬ ಹೆಸರಿಗೆ ಮೋದಿ ಬೆಲೆ ತಂದುಕೊಟ್ಟಿದ್ದಾರೆ: ಸಿ ಟಿ ರವಿ

Date:

Advertisements

ಪ್ರಧಾನಿ ಮೋದಿ ಅವರು ಕೊಟ್ಟ ಮಾತು ತಪ್ಪೋದಿಲ್ಲ ಎಂಬ ನಂಬಿಕೆ ಇತ್ತು. ಭಾರತೀಯ ಸೇನೆ ಮೇಲೂ ಅಪಾರವಾದ ನಂಬಿಕೆ ಇತ್ತು. ಸಿಂಧೂರ ಎಂಬ ಹೆಸರಿಗೆ ಮೋದಿ, ಸೇನೆ ಬೆಲೆ ತಂದುಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಪಾಕ್‌ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯ ಕ್ಷಿಪಣಿ ದಾಳಿ ಕುರಿತು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ಇಂದು ನಮಗೆ ಎರಡನೇ ದೀಪಾವಳಿ ಹಬ್ಬ. ಭಾರತೀಯರ ಸಿಂಧೂರಕ್ಕೆ ಕೈ ಹಾಕಿದ್ದಕ್ಕೆ ಪಾಕಿಗೆ ತಕ್ಕ ಶಾಸ್ತಿಯಾಗಿದೆ. ಭಾರತಮಾತೆ, ಸಹೋದರಿಯರ ಸಿಂಧೂರ ಅಳಿಸಲು ಬಂದವರನ್ನು ಇಂದು ನಾವು ಅಳಿಸಿದ್ದೇವೆ. ಮೋದಿಯವರು ಶತ್ರುಗಳನ್ನು ಪೂರ್ಣ ನಿರ್ನಾಮ ಮಾಡಿ ಅವರನ್ನು ಸಂಪೂರ್ಣವಾಗಿ ಮುಗಿಸಬೇಕು” ಎಂದು ತಿಳಿಸಿದರು.

Advertisements

ʼಆಪರೇಷನ್​ ಸಿಂಧೂರ್ʼ ಮೂಲಕ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್​ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್​ ಮಾಡಿತ್ತು. ಜನರ ತೀವ್ರ ಆಕ್ರೋಶದ ಬಳಿಕ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, “ನಾಗರಿಕರ ನಡುವೆ ಶಾಂತಿ ಇರಬೇಕು. ಶತ್ರುಗಳನ್ನು ಮಟ್ಟ ಹಾಕುವುದೂ ಶಾಂತಿಯೇ. ರಾಜ್ಯ ಕಾಂಗ್ರೆಸ್ ಟ್ವೀಟ್ ಡಿಲೀಟ್ ಮಾಡಿರುವುದನ್ನು ನೋಡಿದ್ದೇನೆ. ಇದು ಬದಲಾಗಿರುವ ಕಾಂಗ್ರೆಸ್ ಮನಸ್ಥಿತಿ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಯೋಗ್ಯತೆಯನ್ನು ಕಳೆದುಕೊಳ್ಳುತ್ತಿದೆ” ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು | ಅನಧಿಕೃತ ಶಾಲೆಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X