ಚಿಕ್ಕಮಗಳೂರು l ಭದ್ರಾ ನದಿಗೆ ಈಜಲು ಹೋಗಿ ಯುವಕ ಸಾವು

Date:

Advertisements

ಭದ್ರಾ ನದಿಯಲ್ಲಿ ಈಜಲು ಹೋಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗಡಿಗೇಶ್ವರದಲ್ಲಿ ಭಾನುವಾರ ನಡೆದಿದೆ. ಜಲಾಲ್ (25) ಮೃತ ಯುವಕ

ಭದ್ರಾ ನದಿಗೆ ಭಾನುವಾರ ಸಂಜೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದ್ದು, ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗದ ಕಾರಣ ಯುವಕ ಮೃತಪಟ್ಟಿದ್ದಾನೆ.

ಘಟನೆ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಸೋಮವಾರ ಮುಳುಗು ತಜ್ಞರು ಮತ್ತು ಅಗ್ನಿಶಾಮಕದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸರ್ವೇ ಅಧಿಕಾರಿ ಆತ್ಮಹತ್ಯೆ

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X