ಚಿಕ್ಕಮಗಳೂರು | ಡ್ರೋಣ್‌ ಕ್ಯಾಮೆರಾದಲ್ಲಿ ಕಣ್ಣಿಗೆ ಬಿದ್ದ ಚಿರತೆಗಳು

Date:

Advertisements

ಮದುವೆಯೊಂದರ ವಿಡಿಯೋ ಚಿತ್ರೀಕರಣ ಮಾಡುವ ವೇಳೆ ಡ್ರೋಣ್ ಕ್ಯಾಮೆರಾದ ಕಣ್ಣಿಗೆ ಎರಡು ಚಿರತೆಗಳು ಸೆರೆ ಸಿಕ್ಕಿವೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಬಳಿಕ ಶಿವಗಿರಿಬೆಟ್ಟದ ಸಮೀಪ ಚಿರತೆಗಳು ಕ್ಯಾಮೆರಾಗೆ ಕಾಣಿಸಿಕೊಂಡಿವೆ.

ಶಿವಗಿರಿಬೆಟ್ಟದ ದೇವಸ್ಥಾನದಲ್ಲಿ ಜೋಡಿಯೊಂದರ ವಿವಾಹ ನಡೆಯುತ್ತಿತ್ತು. ವಿವಾಹದ ಸಂದರ್ಭಗಳನ್ನು ಡ್ರೋಣ್‌ ಕ್ಯಾಮೆರಾದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ, ಕ್ಯಾಮೆರಾದಲ್ಲಿ ಚಿರತೆಗಳ ಕಾಣಿಸಿಕೊಂಡಿವೆ. ಮದುವೆ ಹಾಲ್‌ನಲ್ಲಿ ಹಾಕಲಾಗಿದ್ದ ಪರದೆ ಮೇಲೆ ಚಿರತೆಗಳ ವಿಡಿಯೋ ಕಾಣಿಸಿಕೊಂಡಿದ್ದು, ಕ್ಯಾಮೆರಾಮನ್ ಮತ್ತು ವಿವಾಹದಲ್ಲಿ ಭಾಗಿಯಾಗಿದ್ದವರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Advertisements

ಬೆಟ್ಟದ ಬಯಲಿನಲ್ಲಿ ಚಿರತೆಗಳು ಇರುವುದನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ತಮ್ಮ ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಚಿರತೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ...

Download Eedina App Android / iOS

X