ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

Date:

Advertisements

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ. ಗ್ರಾವಿಟಿ ಮೂಲಕ ತೆಗೆದುಕೊಂಡು ಹೋಗುವುದರಿಂದ ನಾಲಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಭಿಪ್ರಾಯ ಪಟ್ಟಿದೆ.

1002238202

ಇತ್ತೀಚೆಗೆ ತಾನೇ ನಾಲೆಯಿಂದ ಕುಡಿಯುವ ನೀರಿನ ಘಟಕಕ್ಕೆ ನೀರು ಹರಿಸುವ ಕೆಲಸವನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಆರಂಭಿಸಲಾಗಿತ್ತು. ಇದರ ಹಿಂದೆ ಕೆಲ ರೈತರ ಆಕ್ಷೇಪ ವ್ಯಕ್ತವಾಗಿತ್ತು.

ನೀರಾವರಿ ಇಲಾಖೆ ಇಂಜಿನಿಯರ್‌ಗಳು ಭದ್ರಾ ಬಲದಂಡೆ ನಾಲೆಯ ಮೂಲಕ ಬಿಆರ್‌ಪಿನಲ್ಲಿರುವ ಶುದ್ಧೀಕರಣ ಘಟಕಕ್ಕೆ ಕುಡಿಯುವ ನೀರಿಗಾಗಿ 30 ಕ್ಯೂಸೆಕ್‌ ನೀರು ತೆಗೆದುಕೊಂಡು ಹೋಗುವುದರಿಂದ ನಾಲೆಗೆ ತೊಂದರೆ ಇಲ್ಲ ಎಂದು ತಜ್ಞರ ತಂಡ ಅಭಿಪ್ರಾಯಪಟ್ಟಿದೆ ಎಂದು ಚಿತ್ರದುರ್ಗ ಮುಖ್ಯ ಅಭಿಯಂತರರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

Advertisements

ನಾಲೆಯನ್ನು ಸೀಳಿ ಅದಕ್ಕೆ ಸಂಪರ್ಕ ಕಲ್ಪಿಸಿಕೊಂಡು ಹೊಸದುರ್ಗ ತಾಲೂಕಿನ 346 ಗ್ರಾಮ ಅಜ್ಜಂಪುರ ಹಾಗೂ ತರೀಕೆರೆ ತಾಲೂಕಿನ 172 ಗ್ರಾಮಗಳಿಗೆ ನೀರು ತೆಗೆದುಕೊಂಡು ಹೋಗಲು ರೂಪಿಸಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ದಾವಣಗೆರೆ ಅಚ್ಚುಕಟ್ಟು ಪ್ರದೇಶದ ಕೆಲವು ರೈತರು ಆಕ್ಷೇಪ ವ್ಯಕ್ತಪಡಿಸಿದ್ದರು.‌ ಕಾಮಗಾರಿ ನಿಲ್ಲಿಸಿದ ಸರ್ಕಾರ ಯೋಜನೆ ಬಗ್ಗೆ ರೈತರ ಒತ್ತಡಕ್ಕೆ ಮಣಿದು ಭಾರತೀಯ ವಿಜ್ಞಾನ ಸಂಸ್ಥೆಯ ಇಂಜಿನಿಯರ್ ಗಳ ತಂಡಕ್ಕೆ ಪರಿಶೀಲಿಸಿ ವರದಿ ಸಲ್ಲಿಸಲು ತಿಳಿಸಿದ್ದರು. ಅದರಂತೆ ಪರಿಶೀಲನೆ ನಡೆಸಿದ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ತಂಡ ಇಡೀ ಕಾಮಗಾರಿ ವೈಜ್ಞಾನಿಕವಾಗಿದ್ದು, ಇದರಿಂದ ಜಲಾಶಯ ಅಥವಾ ನಾಲೆಗೆ ಯಾವುದೇ ತೊಂದರೆ ಇಲ್ಲ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಂಡ ಕಾಮಗಾರಿಗೆ ಹಸಿರು ನಿಶಾನೆ ತೋರಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದೆ.

1002238203

ಭಾರತೀಯ ವಿಜ್ಞಾನ ಸಂಸ್ಥೆಯ ತಂಡದ ವರದಿ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಕಾಮಗಾರಿ ಇಂದಿನಿಂದ ಪುನರಾರಂಭ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸೈನಿಕ ಹುಳುಗಳ ಹಾವಳಿಗೆ ನಲುಗಿದ ಮೆಕ್ಕೆಜೋಳ; ರೈತರ ನೆರವಿಗೆ ಬರಬೇಕಿದೆ ಕೃಷಿ ವಿಜ್ಞಾನ, ಸರ್ಕಾರ

ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಉದ್ದೇಶಕ್ಕೆ 30 ಕ್ಯೂಸೆಕ್‌ ಹರಿಸುವುದರಿಂದ ಕೊನೆಯ ಭಾಗದ ರೈತರಿಗೆ ನೀರು ಹರಿಯಲು ಯಾವುದೇ ತೊಂದರೆ ಆಗುವುದಿಲ್ಲ. ತಾಂತ್ರಿಕವಾಗಿ ಹೆಚ್ಚು ನೀರನ್ನು ಶುದ್ಧೀಕರಣ ಘಟಕಕ್ಕೂ ತೆಗೆದುಕೊಂಡು ಹೋಗಲಾಗುವುದಿಲ್ಲ. ಹೀಗಾಗಿ ರೈತರು ಅನಗತ್ಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಇಂಜಿನಿಯರ್‌ಗಳು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಜುಲೈ 15ಕ್ಕೆ ನೀರು ಹರಿಸಬೇಕು. ಅಷ್ಟರಲ್ಲಿ ಕಾಮಗಾರಿ ಮುಗಿಯಬೇಕು ಎಂದು ದಾವಣಗೆರೆಯ ಹೋರಾಟಗಾರರು ಒತ್ತಡ ಹೇರಿದ್ದರು. ಮಳೆಯ ಪ್ರಮಾಣ, ಜಲಾಶಯದ ನೀರಿನ ಮಟ್ಟ ನೋಡಿಕೊಂಡು,
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಕಾಡಾ) ಐಸಿಸಿ ಸಭೆ ನಡೆಸಿ ಕಳೆದ ವರ್ಷ ಜುಲೈ 29ಕ್ಕೆ ನಾಲೆಗೆ ನೀರು ಹರಿಸಿತ್ತು. ಕಾಮಗಾರಿ ಹಿನ್ನೆಲೆಯಲ್ಲಿ ಈ ಬಾರಿ ಯಾವಾಗ ನೀರು ಹರಿಸಲಿದೆ ತೀರ್ಮಾನಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ...

ಕರ್ನಾಟಕದ ಹಲವು ಭಾಗಗಳಲ್ಲಿ ನಿಲ್ಲದ ಮಳೆ, ನದಿ ದಡದ ಹಳ್ಳಿಗಳಲ್ಲಿ ಪ್ರವಾಹದ ಭೀತಿ

ಕರ್ನಾಟಕದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಳೆಗಳು ಹಾನಿಗೊಳಗಾಗಿವೆ. ಹಲವಡೆ ರಸ್ತೆ...

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣ; ಕೋಮುದ್ವೇಷ ಹೇಳಿಕೆ ಆರೋಪ, ಶಾಸಕ ಯತ್ನಾಳ್ ವಿರುದ್ಧ ದೂರು

ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ...

₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ,...

Download Eedina App Android / iOS

X