ಎರಡು ತಿಂಗಳ ಹಿಂದೆ ಬಾಲ್ಯದ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಶಿವರಾಜ್ ಮಡಿವಾಳ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ.
ಶಿವರಾಜ್ ಅವರು ಕೆಲಸಕ್ಕಾಗಿ ಮಹಾರಾಷ್ಟ್ರದ ಪುಣೆ ತೆರಳಿ ಅಲ್ಲಿಯೇ ಕುಟುಂಬಸ್ಥರ ಜೊತೆಗೆ ವಾಸವಿದ್ದರು. ಆತನ ಬಾಲ್ಯದ ಸ್ನೇಹಿತ ಪ್ರವೀಣ್ ಚವ್ಹಾಣ ಅವರು ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.ಆತನ ಸಾವಿನಿಂದ ಶಿವರಾಜ್ ಬಹಳಷ್ಟು ಜಿಗುಪ್ಸೆಗೊಂಡಿದ್ದರು.
ಬ್ಯಾಂಕ್ ಕೆಲಸಕ್ಕೆಂದು ಕಲಬುರಗಿಗೆ ಬಂದಿದ್ದ ಶಿವರಾಜ್ ಅವರು ಸ್ಟೇಷನ್ ಬಜಾರ್ ಬಳಿಯ ಲಾಡ್ಜ್ವೊಂದರಲ್ಲಿ ಉಳಿದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬೇಡಿಕೆ : ಇಚ್ಚಾಶಕ್ತಿ ತೋರದ ಜನಪ್ರತಿನಿಧಿಗಳು
ಈ ಕುರಿತು ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.