ಬೆಂಗಳೂರು | ವಿಶ್ವ ಕ್ಯಾನ್ಸರ್‌ ದಿನ: ಒಂದು ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾದ ಕ್ಯಾನ್ಸರ್ ಪೀಡಿತ ಮಕ್ಕಳು

Date:

Advertisements

ಫೆ.4ರಂದು ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಸುಮಾರು ನಾಲ್ಕು ಮಂದಿ ಕ್ಯಾನ್ಸರ್ ಪೀಡಿತ ಮಕ್ಕಳು ಪೊಲೀಸ್ ಕಮಿಷನರ್ ಎದುರು ಪೊಲೀಸ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹಾಗೂ ಪರಿಹಾರ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಇಂದಿನ ಕಾರ್ಯಕ್ರಮದಲ್ಲಿ ಮಕ್ಕಳಾದ ವಿಜಯಪುರದ 10ನೇ ತರಗತಿ ವಿದ್ಯಾರ್ಥಿನಿ ಪಲ್ಲವಿ, ಕೊಪ್ಪಳದ ದಿವ್ಯಶ್ರೀ, 9ನೇ ತರಗತಿಯ ಮೈಸೂರಿನ ವಿಶ್ವಾಸ್ ಮತ್ತು 7ನೇ ತರಗತಿ ವಿದ್ಯಾರ್ಥಿ ತುಮಕೂರಿನ ಜೀವನ್ ಕುಮಾರ್ ಎಂಬವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಹೂಗುಚ್ಛ ನೀಡಿ, ಸ್ವಾಗತಿಸಿದರು.

police 15

ಬಳಿಕ ಬೆಂಗಳೂರಿನ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ ದಯಾನಂದ, “ಅಪರಾಧಗಳು ಸಮಾಜಕ್ಕೆ ಕ್ಯಾನ್ಸರ್ ರೋಗದಂತೆ. ಕ್ಯಾನ್ಸರ್ ವಿರುದ್ಧ ಹೇಗೆ ವೈದ್ಯರು ರೋಗಿಗಳನ್ನು ಕಾಪಾಡಲು ಶ್ರಮಿಸುತ್ತಾರೋ ಅದೇ ರೀತಿ ಅಪರಾಧಗಳ ವಿರುದ್ಧ ಪೊಲೀಸರು ಹೋರಾಟ ನಡೆಸುತ್ತಿದ್ದಾರೆ” ಎಂದು ತಿಳಿಸಿದರು.

Advertisements

“ಜೀವನ ಬಹಳ ಮೌಲ್ಯವಾದದ್ದು. ಅದನ್ನು ರಸ್ತೆ ಅಪಘಾತದ ಮೂಲಕ ಕಳೆದುಕೊಳ್ಳಬಾರದು. ಸಂಚಾರ ಸುರಕ್ಷತೆ ಮತ್ತು ನಿಯಮಗಳನ್ನು ಪಾಲಿಸಿದರೆ ಸುರಕ್ಷಿತವಾಗಿರಬಹುದು. ಬೇರೆಯವರೂ ಕೂಡ ಸಂಚಾರ ನಿಯಮಗಳನ್ನು ಪಾಲಿಸಲು ಪ್ರೇರಣೆ ನೀಡಬೇಕು” ಎಂದು ಸಂದೇಶ ನೀಡಿದರು.

ಇದನ್ನು ಓದಿದ್ದೀರಾ? ಮಂಗಳೂರು | ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಗೆ ದಾಳಿ ಪ್ರಕರಣ: ಮತ್ತೋರ್ವನ ಬಂಧನ

ಈ ಸಂದರ್ಭದಲ್ಲಿ ಪರಿಹಾರ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ರಾಣಿಶೆಟ್ಟಿ, ಬೆಂಗಳೂರು ನಗರ ಸಂಚಾರ ಜಂಟಿ ಆಯುಕ್ತ ಎಂ.ಎನ್. ಅನುಚೇತ್, ಕಿದ್ವಾಯಿ ಆಸ್ಪತ್ರೆಯ ಡಾ. ಅರುಣ್, ಲೋಕೇಶ್, ರಾಜಣ್ಣ, ಕ್ಯಾನ್ಸರ್ ಪೀಡಿತ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

bcp
2 22
1 29
3 22
parihar
cancer
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X