ಚಿಂತಾಮಣಿ | ಆಫ್ರಿಕನ್ ಜ್ವರ; ನೂರಾರು ಹಂದಿಗಳ ಕೆರೆಗೆ ಬಿಸಾಡಿದ ಮಾಲೀಕ

Date:

Advertisements

ಆಫ್ರಿಕನ್ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಹಂದಿ ಮಾಲೀಕ ಸತ್ತ ಹಂದಿಗಳನ್ನು ಕೆರೆಗೆ ಬಿಸಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಬ್ಬರಿ ಗ್ರಾಮದ ಸಮೀಪವಿರುವ ಕೆರೆಯಲ್ಲಿ ಕಂಡು ಬಂದಿದೆ.

ಸುಮಾರು ಒಂದು ತಿಂಗಳಿನಿಂದ ವೆಂಕಟರೆಡ್ಡಿ ಎಂಬಾತ ತಮ್ಮ ತೋಟದಲ್ಲಿ ಹಂದಿ ಸಾಕಾಣಿ ಮಾಡುತ್ತಿದ್ದು, ಕೆಲ ಹಂದಿಗಳು ಮೃತಪಟ್ಟ ಹಿನ್ನೆಲೆ ಅದರ ರಕ್ತ ಪರೀಕ್ಷೆ ಮಾಡಿದ ನಂತರ ಆಫ್ರಿಕನ್ ಜ್ವರ ಹರಡಿರುವುದು ಧೃಡಪಟ್ಟಿದೆ.

ಹಂದಿ ಮಾಲೀಕ ಸತ್ತ ಹಂದಿಗಳನ್ನು ತೋಟದ ಸಮೀಪವಿರುವ ಕೆರೆಗೆ ಬಿಸಾಡಿರುವುದನ್ನು ಕಂಡ ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್, ಡಿವೈಎಸ್ಪಿ ಮುರಳಿಧರ್,ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್,ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಪಶುಪಾಲನಾ ಇಲಾಖೆ ಡಿಡಿ ರಂಗಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಹೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ರೆಡ್ಡಿ ಸೇರಿ ಹಲವು ಅಧಿಕಾರಿಗಳು ಮೊಕ್ಕಾಂ ಸ್ಥಳದಲ್ಲೇ ಹೂಡಿ ಕೆರೆಯಲ್ಲಿ ಸತ್ತಿರುವ ಹಂದಿಗಳನ್ನು ಜೆಸಿಬಿ ಮುಖಾಂತರ ಬೇರೆ ಕಡೆ ಸ್ಥಳಾಂತರ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತಿಯಿಂದ ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಒಳ ಮೀಸಲಾತಿ: ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹ; ಪಟ್ರೇನಹಳ್ಳಿ ಕೃಷ್ಣ

ಇನ್ನು ಈ ಕುರಿತು ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್ ಹಂದಿ ಸಾಕಾಣಿಕೆ ಮಾಡಿ ಸತ್ತ ಹಂದಿಗಳನ್ನು ಕೆರೆಗೆ ಬಿಸಾಡಿರುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ. ಕೆರೆಯಲ್ಲಿ ಬಿಸಾಡಿರುವ ಹಂದಿಗಳಿಂದ ಯಾವುದೇ ರೀತಿಯ ಬೇರೆ ಪ್ರಾಣಿಗಳಿಗೆ ತೊಂದರೆ ಉಂಟಾಗಲ್ಲ ಜನರು ಯಾವುದೇ ಕಾರಣಕ್ಕೂ ಭಯಭೀತರಾಗಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X