ಚಿಂತಾಮಣಿ | ಎರಡು ವರ್ಷಗಳ ಪ್ರೀತಿಗೆ ಪೋಷಕರ ವಿರೋಧ; ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ

Date:

Advertisements

ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು ಮನನೊಂದು ಕೃಷಿ ಹೊಂಡಕ್ಕೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ವಿವಾಹಿತ ಯುವತಿ ಅನುಷಾ(19) ಮತ್ತು ಎಂ.ಮುದ್ದಲಹಳ್ಳಿ ಗ್ರಾಮದ ವೇಣು(21) ಮೃತ ಪ್ರೇಮಿಗಳು.

ಚೇಳೂರು ತಾಲೂಕು ಮಾಡಪಲ್ಲಿ ಗ್ರಾಮದ ಅನುಷಾ ಮತ್ತು ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದ ವೇಣು ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗುವ ಕನಸು ಕಂಡಿದ್ದರು. ಆದರೆ ಪೋಷಕರು ಒಪ್ಪಿರಲಿಲ್ಲ. ಯುವತಿ ಅನುಷಾಳನ್ನು ಕಳೆದ ಮೇ ತಿಂಗಳಲ್ಲಿ ಕಾಚಹಳ್ಳಿಯ ಯುವಕನಿಗೆ ಕೊಟ್ಟು ಮದುವೆ ಮಾಡಿದ್ದರು. ದಾಬಸ್ ಪೇಟೆಯಲ್ಲಿ ಗಂಡ ಹೆಂಡತಿ ವಾಸವಿದ್ದರು. ಆಷಾಡ ಮಾಸಕ್ಕೆಂದು ಅನುಷಾಳ ಗಂಡ ಚೌಡರೆಡ್ಡಿ ಚೇಳೂರು ತಾಲೂಕು ಮಾಡಪಲ್ಲಿಯ ತವರು ಮನೆಗೆ ಬಿಟ್ಟು ಬಂದಿದ್ದರು.

Advertisements

ಮದುವೆ ನಂತರವೂ ಪ್ರೀತಿ ಮುಂದುವರಿದಿತ್ತು. ಗಂಡನಿಗೆ ಎಟಿಎಮ್ ಮಾಡಿಸಬೇಕು ಎಂದು ನೆಪ ಹೇಳಿ ಶುಕ್ರವಾರ ಮನೆಯಿಂದ ಹೊರಹೋಗಿದ್ದ ಅನುಷಾ, ತನ್ನ ಪ್ರಿಯಕರನನ್ನು ಭೇಟಿಯಾಗಲು ಎಂ.ಮುದ್ದಲಹಳ್ಳಿಗೆ ಬಂದಿದ್ದಳು. ಆನಂತರ ಊರಿನ ಸಮೀಪದ ತೋಟಕ್ಕೆ ಹೋಗಿ ಸಾಯುವ ನಿರ್ಧಾರ ಮಾಡಿದ್ದಾರೆ. ಮೊಬೈಲ್, ಪರ್ಸ್ ಬಿಟ್ಟು ಅಲ್ಲೇ ಬಿಟ್ಟು, ಇಬ್ಬರು ದುಪ್ಪಟ್ಟ ಕಟ್ಟಿಕೊಂಡು ತೋಟದಲ್ಲಿದ್ದ ಕೃಷಿ ಹೊಂಡಕ್ಕೆ ಹಾರಿ ಜೀವ ಬಿಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

ಕರೆ ಸ್ವೀಕರಿಸದ ಹಿನ್ನೆಲೆ ಅನುಷಾ ಗಂಡ ಕೆಂಚಾರ್ಲ ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶನಿವಾರ ಕೃಷಿ ಹೊಂಡದ ಮಾಲೀಕ ಚಲಪತಿ ಎಂಬುವವರು ತೋಟಕ್ಕೆ ತೆರಳಿದ್ದ ವೇಳೆ ಕೃಷಿ ಹೊಂದ ಸಮೀಪ ಮೊಬೈಲ್, ಪರ್ಸ್ ಇರುವುದನ್ನು ಗಮನಿಸಿದ್ದಾರೆ. ಆ ಬಳಿಕ  ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕೃಷಿ ಹೊಂಡದಲ್ಲಿದ್ದ ಶವಗಳನ್ನು ಪತ್ತೆ ಹಚ್ಚಿದ್ದು, ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X