ಚಿಂತಾಮಣಿ | ಹಿರಿಯ ನಾಗರಿಕರ ವಿವಿಧ ಸ್ಪರ್ಧೆಗಳಿಗೆ ಸಚಿವ ಡಾ. ಎಂ ಸಿ ಸುಧಾಕ‌ರ್ ಚಾಲನೆ

Date:

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಅಭಿಮಾನ ಬಳಗದಿಂದ ನಡೆಸುತ್ತಿರುವ ʼಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆʼ ಕಾರ್ಯಕ್ರಮಕ್ಕೆ ಹಸಿರು ಬಾವುಟ ಹಾರಿಸುವ ಮೂಲಕ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ಚಾಲನೆ ನೀಡಿದರು.

- Advertisement -

“ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಚಿಂತಾಮಣಿ ನಗರವನ್ನು ಸ್ವಚ್ಛ ಸುಂದರ ಹಾಗೂ ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಪ್ಲಾಸ್ಟಿಕ್ ಚೀಲಗಳಲ್ಲಿ ಕಸವನ್ನು ತುಂಬಿ ವಾಹನಗಳಲ್ಲಿ ಬಂದು ಎಸೆದು ಹೋಗುತ್ತಿರುವುದನ್ನು ನೋಡಿದರೆ ಸ್ವಚ್ಛ ನಗರವನ್ನಾಗಿಸಲು ಅಸಾಧ್ಯವಾಗಿದ್ದು, ಸಾರ್ವಜನಿಕರ ಸಹಕಾರವಿದ್ದಲ್ಲಿ ಮಾತ್ರ ಸ್ವಚ್ಛ ನಗರದ ಕನಸು ನನಸಾಗುತ್ತದೆ” ಎಂದು ಸಚಿವ ಡಾ. ಎಂ ಸಿ ಸುಧಾಕರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಕ್ಷೇತ್ರದ ಅಭಿವೃದ್ಧಿಗಾಗಿ ರಸ್ತೆ, ಕ್ರೀಡಾಂಗಣ, ಒಳಚರಂಡಿ, ಕೆರೆ, ಚೆಕ್‌ ಡ್ಯಾಂ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಿದ್ದು, ₹1,500 ಕೋಟಿ ವೆಚ್ಚ ವ್ಯಯ ಮಾಡಲಾಗುತ್ತಿದೆ. ಭಕ್ತರಹಳ್ಳಿ ಅರಸನಕೆರೆ, ನೆಕ್ಕುಂದಿ ಕೆರೆ, ಕನ್ನಂಪಲ್ಲಿಕೆರೆ ಸೇರಿದಂತೆ ತಾಲೂಕಿನ ವಿವಿಧ ಕೆರೆಗಳನ್ನು ಹಾಗೂ ಮುಂಗಾನಹಳ್ಳಿ ಹೋಬಳಿಯ ಕುಶಾವತಿ ನದಿಗೆ ಅಡ್ಡಲಾಗಿ ಚೆಕ್‌ ಡ್ಯಾಂಗಳನ್ನು ನಿರ್ಮಿಸುತ್ತಿದ್ದು, ಇದರಿಂದ ಒಮ್ಮೆ ಭರಪೂರ ಮಳೆಯಾದರೆ 4-5 ವರ್ಷಗಳಿಗೆ ಆಗುವಷ್ಟು ನೀರು ಸಂಗ್ರಹಣೆಯಾಗಲಿದೆ” ಎಂದರು.

“ವಿರೋಧ ಪಕ್ಷದವರಿಗೆ ಇವೆಲ್ಲವೂ ಗೌಣ್ಯವಾಗಿರುತ್ತದೆ ಹಾಗೂ ಅವರ ಹತ್ತು ವರ್ಷಗಳ ಅವಧಿಗಳಲ್ಲಿ ಯಾವುದೇ ಅಭಿವೃದ್ಧಿಯಾಗದಿರುವುದನ್ನು ಜನತೆಗೆ ತಿಳಿದಿದೆ” ಎಂದು ಕಿಡಿಕಾರಿದರು.

ವಿವಿಧ ರೀತಿಯ ಸ್ಪರ್ಧೆಗಳಾದ ವಾಕಿಂಗ್, ಮಡಿಕೆ ಹೊಡೆಯುವುದು, ಗುಂಡುಎಸೆತ, ಮ್ಯೂಸಿಕಲ್ ಛೇರ್ ಹಾಗೂ ಚಮಚ ಮತ್ತು ನಿಂಬೆ ಹಣ್ಣಿನ ಓಟಗಳನ್ನು 60, 70, 80, 90 ವರ್ಷ ಮೇಲ್ಪಟ್ಟರ ಶ್ರೇಣಿಗಳನ್ನು ವರ್ಗೀಕರಿಸಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಆಟೋಟಗಳನ್ನು ಏರ್ಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪೋಷಕರ ಆಯ್ಕೆ ನಮ್ಮ ಕೈಯ್ಯಲ್ಲಿಲ್ಲ: ಆರೋಗ್ಯದ ಆಯ್ಕೆ ನಮ್ಮ ಕೈಯ್ಯಲ್ಲಿದೆ: ಡಾ. ಸಿ.ಎಸ್. ಹಿರೇಮಠ್

ಪ್ರತಿಯೊಂದು ಸ್ಪರ್ಧೆಯಲ್ಲೂ ಮೂವರು ವಿಜೇತರನ್ನು ಆರಿಸಲಾಯಿತು. ಅವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಸಂಘಟಕ ಡಾ. ವಿ ಅಮ‌ರ್, ವೈ ಬಿ ಅಶ್ವತ್ಥ ನಾರಾಯಣ, ಹೆಚ್ ಎನ್ ಮಹೇಶ್‌ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಜಗನ್ನಾಥ್, ನಾಮನಿರ್ದೇಶಿತ ಸದಸ್ಯ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮೀನಾರಾಯಣ ರೆಡ್ಡಿ, ವೆಂಕಟರವಣಪ್ಪ, ಉಮೇಶ್, ಕಲ್ಯಾಣ್ ರೆಡ್ಡಿ, ಫಾರೂಕ್, ಆರ್ ಡಿ ಮಂಜುನಾಥ್, ಎಸ್ ಮಂಜುನಾಥ್, ಮುನಿರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...