ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ಒಂದು ದೊಡ್ಡ ಶಾಪವಾಗಿ ಪರಿಣಮಿಸಿದೆ.ಈ ನಿಟ್ಟಿನಲ್ಲಿ ಯುವಜನತೆಗೆ ದಾರಿದೀಪವಾಗಲು ಮತ್ತು ಆರ್ಥಿಕ ಸಬಲೀಕರಣ ತರಲು ‘ಡ್ರೀಮ್ ಡೀಲ್'(Dream Deal) ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಚಿಂತಾಮಣಿ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಮೊಹಮ್ಮದ್ ಮುಝಮಿಲ್ ಮತ್ತು ಹುಸೇನ್ ಸಾಬಿ ಕಂಪನಿ ಉದ್ದೇಶ ಹಾಗೂ ಕಾನೂನಾತ್ಮಕ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.
ನಿರುದ್ಯೋಗಿ ಯುವಕ-ಯುವತಿಯರಿಗೆ ಕೇವಲ ಕೆಲಸ ನೀಡುವುದಲ್ಲದೆ,ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶವನ್ನು ಸಂಸ್ಥೆ ಹೊಂದಿದೆ.ಈಗಾಗಲೇ ಸುಮಾರು 5,000ಕ್ಕೂ ಹೆಚ್ಚು ಜನರಿಗೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ನಿರ್ದೇಶಕರು ಹೆಮ್ಮೆಯಿಂದ ತಿಳಿಸಿದರು.
ಸಂಸ್ಥೆಯ ಮೇಲೆ ಕೇಳಿಬಂದಿದ್ದ ಅಪಸ್ವರಗಳಿಗೆ ಉತ್ತರಿಸಿದ ಅವರು, “ನಮ್ಮ ಕಂಪನಿಯ ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ.ರಾಮನಗರ ಸೇರಿದಂತೆ ವಿವಿಧೆಡೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ. ಹೈಕೋರ್ಟ್ನಿಂದಲೂ ಸಕಾರಾತ್ಮಕ ಅನುಮತಿ ದೊರೆತಿದ್ದು,ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಗ್ರಾಹಕರಿಗೆ ಭರವಸೆ ನೀಡಿದರು.
ಕಂಪನಿಯು ಜನರಿಗೆ ನೀಡಿದ ಭರವಸೆಯಂತೆ ಮನೆ ಮನೆಗೆ ಗುಣಮಟ್ಟದ ಉತ್ಪನ್ನಗಳನ್ನು ತಲುಪಿಸುವ ಜವಾಬ್ದಾರಿಯನ್ನು ಹೊತ್ತಿದೆ.ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರ ಮಾರುಕಟ್ಟೆಯ ಮೂಲಕ ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.
ಕೇವಲ ವ್ಯವಹಾರವಷ್ಟೇ ಅಲ್ಲದೆ, ಜಿಲ್ಲೆಯ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವುದು ಸಂಸ್ಥೆಯ ಮೂಲ ಮಂತ್ರವಾಗಿದೆ ಎಂದು ಅವರು ಹೇಳಿದರು.
ಇದನ್ನು ಓದಿದ್ದೀರಾ..? ಕೋಲಾರ | ಬಿಸಿಲಿನ ಧಗೆಯಿಂದ ರಕ್ಷಣೆ ಪಡೆಯಲು ಜಿಲ್ಲೆಯ ಜನರು ಮುಂಜಾಗ್ರತಾ ಕ್ರಮ ವಹಿಸಿ : ಎಂ.ಆರ್.ರವಿ, ಜಿಲ್ಲಾಧಿಕಾರಿ
ಪತ್ರಿಕಾಗೋಷ್ಠಿಯಲ್ಲಿ ಕಂಪನಿಯ ಪ್ರಮುಖರಾದ ನವೀನ್ ಕುಮಾರ್ ಎನ್,ಚಂದ್ರಶೇಖರ್ ರೆಡ್ಡಿ,ಸುಧಾರಾಣಿ ಎನ್,ದೀಪ ಕೆ,ರತ್ನಮ್ಮ,ರಹತ್ ಬಾನು,ತುಳಸಿ ಜಿ,ನರಸಿಂಮೂರ್ತಿ, ನಾರಾಯಣಸ್ವಾಮಿ,ಪ್ರವರ್ತಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.ಡ್ರೀಮ್ ಡೀಲ್’ ಮೂಲಕ ಉದ್ಯೋಗ ಪಡೆದ ಯುವಕರು ತಮ್ಮ ಜೀವನ ಮಟ್ಟ ಸುಧಾರಿಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.




