ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ 2019ರಲ್ಲಿ ಕುಂಬಾರರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪನೆ ಮಾಡಿದ್ದು, ಕಾರಣಾಂತರಗಳಿಂದ ಉದ್ಘಾಟನೆ ಮಾಡುವ ಅವಕಾಶ ಭಾಗ್ಯ ಒದಗಿಬಂದಿರಲಿಲ್ಲ. ಇಂದು ಸಂಘದ ಕಚೇರಿ ಹಾಗೂ ಸಂಘವನ್ನು ಉದ್ಘಾಟನೆ ಮಾಡಿದ್ದೇವೆ ಚಿಂತಾಮಣಿ ತಾಲೂಕು ಕುಂಬಾರರ ಕ್ಷೇಮಾಭಿವೃದ್ಧಿ ಅಧ್ಯಕ್ಷ ಆರ್ ವೆಂಕಟಚಲಪತಿ ಹೇಳಿದರು.
ಚಿಂತಾಮಣಿ ನಗರದ ಗ್ರಂಥಾಲಯ ಪಕ್ಕದಲ್ಲಿ ಇಂದು ನೂತನವಾಗಿ ತಾಲೂಕು ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
“ಸರ್ಕಾರದಿಂದ ಬರುವಂತಹ ಎಲ್ಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಲು ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕು, ಈಗಾಗಲೇ ತಾಲೂಕಿನ ದೊಡ್ಡಹಳ್ಳಿ ಸರ್ವೆ ನಂಬರ್ 13ರಲ್ಲಿ 3 ಗುಂಟೆ ಜಮೀನನ್ನು ಸರ್ಕಾರಿ ಅಧಿಕಾರಿಗಳು ಭವನ ನಿರ್ಮಾಣ ಮಾಡಿಕೊಳ್ಳಲು ಮಂಜೂರು ಮಾಡಿಕೊಟ್ಟಿದ್ದು, ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳು ಸಿಗುವಂತಹ ಕೆಲಸವನ್ನು ನಾವೆಲ್ಲರೂ ಮಾಡುತ್ತೇವೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಕೆ ಎಂ ರೆಡ್ಡಪ್ಪ, ಉಪಾಧ್ಯಕ್ಷ ಗೋವಿಂದ, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಶಿವಶಂಕರ್, ವಗರಿ ಖಜಾಂಚಿ ಗೋವಿಂದರಾಜು, ಜಂಟಿ ಖಜಾಂಚಿ ಕೆ ನಾಗೇಶ್, ಆಂತರಿಕ ಲೆಕ್ಕ ಪರಿಶೋಧಕ ಮಂಜುನಾಥ್, ಪತ್ರಿಕಾ ಪ್ರತಿನಿಧಿ ಕೇಬಲ್ ನಾರಾಯಣ್, ನಿರ್ದೇಶಕರಾದ ವೆಂಕಟಸ್ವಾಮಿ, ವೆಂಕಟಲಕ್ಷ್ಮಮ್ಮ, ಮುನಿಸ್ವಾಮಿ, ರಮೇಶ್, ವೆಂಕಟಸ್ವಾಮಿ, ಶ್ರೀನಿವಾಸ್, ನಾಗಪ್ಪ, ಸೀನಪ್ಪ, ಆರ್ ಮಂಜು, ಮುರಳಿ, ಸರ್ವಜ್ಞ ಕವಿ ಸಲಹಾ ಸಮಿತಿ ಸದಸ್ಯ ಎನ್ ಅಂಬರೀಶ್, ಶಿವರಾಂ, ಕೃಷ್ಣಪ್ಪ, ತಿಮ್ಮಯ್ಯ ,ನಾರಾಯಣಸ್ವಾಮಿ, ಶ್ರೀ ರಾಮ್, ಗೋಪಾಲಕೃಷ್ಣಪ್ಪ, ಅಶ್ವಥ್ ನಾರಾಯಣ, ರಾಮಪ್ಪ ಸೇರಿದಂತೆ ಇತರರು ಇದ್ದರು.