ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

Date:

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು.

ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರೊ.ಬಿ ಕೃಷ್ಣಪ್ಪ ಅವರ 86ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾಮಾಜಿಕ ರಕ್ಷಣೆಗಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಸ್ತ್ರವನ್ನು ಶೋಷಿತರ ಕೈಗೆ ನೀಡಿದ ಕೀರ್ತಿ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“1970ರ ದಶಕದಲ್ಲಿನ ಮೌಢ್ಯಾಚರಣೆ ಹೆಸರಿನಲ್ಲಿ ಶೋಷಿತರ ಶೋಷಣೆ, ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ದಲಿತರ ಭೂ ಕಬಳಿಕೆ ಪ್ರಕರಣಗಳಿಗೆ ಹೋರಾಟದ ಶಕ್ತಿಯಾಗಿ ನಿಂತವರು ಕೃಷ್ಣಪ್ಪ. ಅಂಬೇಡ್ಕ‌ರ್ ಅವರ ವಿಚಾರಧಾರೆಯಿಂದ ಪ್ರೇರಿತರಾಗಿದ್ದ ಕೃಷ್ಣಪ್ಪ, ರಾಜ್ಯದಲ್ಲಿ ದಸಂಸ ಸಂಘಟನೆ ಕಟ್ಟುವ ಮೂಲಕ ದಲಿತ ಮತ್ತು ಶೋಷಿತ ಸಮುದಾಯಕ್ಕೆ ಸಾಮಾಜಿಕ ರಕ್ಷಣೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

“ಕೃಷ್ಣಪ್ಪ ಅವರ ಆದರ್ಶ ಮತ್ತು ಹೋರಾಟದ ದೃಷ್ಟಿಕೋನವನ್ನು ಉಳಿಸಿಕೊಳ್ಳುವ ಜವಬ್ದಾರಿ ದಲಿತರ ಮೇಲಿದೆ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೌಲಭ್ಯ ಮತ್ತು ಒಡೆತನವನ್ನು ಧಕ್ಕಿಸಿಕೊಳ್ಳಲು ಹೋರಾಟವೇ ಪ್ರಮುಖ ಅಸ್ತ್ರ. ಹಾಗಾಗಿ ಹಲವು ಸಂಘಟನೆಗಳು ಒಗ್ಗೂಡಿ ಹೋರಾಟದ ಶಕ್ತಿಯನ್ನು ಗಟ್ಟಿಗೊಳಿಸಿಕೊಳ್ಳಬೇಕಾಗಿದೆ” ಎಂದರು.

ಕೆ ಬಿ ನಾಗರಾಜ್, ಅಂಜಿನಪ್ಪ, ಚನ್ನಿಗರಾಮಯ್ಯ, ಎನ್ ತಿಪ್ಪೇರುದ್ರಪ್ಪ, ಜಾಲಿ ಮಂಜು, ಎನ್ ಹೊನ್ನೂರಸ್ವಾಮಿ, ಡಿ.ಸೋಮಶೇಖರ್, ಹಳೇಟೌನ್ ಬದ್ರಿ, ಆರ್ ರುದ್ರಮುನಿ, ಜಗದೀಶ, ನಿಂಗರಾಜ್‌, ಡಿ ತಿಪ್ಪೇಸ್ವಾಮಿ, ಮಹಾಂತೇಶ್, ಎ ಮಾರುತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ...

ರಾಯಚೂರು | ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ; ಬಿಜೆಪಿ ಅಭ್ಯರ್ಥಿ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯ್ಕ ಅವರ...

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಯವರಿಗೆ ಜನರ ಕಷ್ಟಗಳ ಅರಿವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು...

ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ

ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ...