ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್

Date:

Advertisements

ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧದ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಬಡವರಿಗೆ ಸಿಗುತ್ತಿದ್ದ ಸಾರಾಯಿ ಬಂದ್ ಮಾಡಿ ದುಬಾರಿ ಬೆಲೆ ತೆತ್ತು ಕುಡಿಯುವಂತೆ ಮಾಡಿದ್ದು, ಖಾಸಗಿ ಮದ್ಯ ತಯಾರಿಕಾ ಕಂಪನಿಗಳು ಮತ್ತು ಮಾರಾಟಗಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಆರೋಪ ಮಾಡಿದ್ದಾರೆ.

ಎಲ್ಲ ರೀತಿಯ ಬ್ರಾಂಡಿ, ವಿಸ್ಕೀ, ಬಿಯರ್, ರಮ್ ಇತ್ಯಾದಿ ಮದ್ಯಗಳ ಬೆಲೆ ಹೆಚ್ಚಳ ಮಾಡಿ ಬಡವರ, ಕೂಲಿ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಲಾಗಿದೆ. ಸರ್ಕಾರದ ಎಲ್ಲ ರೀತಿಯ ಆರ್ಥಿಕ ಸಂಕಷ್ಟಕ್ಕೆ ಪಾನಪ್ರಿಯರ ಮೇಲೆ ತೆರಿಗೆ ಹಾಕಿ ಸರ್ಕಾರಕ್ಕೆ ಆದಾಯ ಹೆಚ್ಚು ಮಾಡಿಕೊಳ್ಳುವ ಪರಿಪಾಠ ನಿಲ್ಲಬೇಕು. ದುಡಿಮೆಯ ಮುಕ್ಕಾಲು ಪಾಲು ಹಣ ಕುಡಿಯಲು ಖರ್ಚು ಮಾಡಿ, ಕುಟುಂಬ ಸಾಕುವುದು ದುಸ್ತರವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರತಿ ಬಾಟಲಿ ಮದ್ಯದ ಮೇಲೆ ಶೇ. 65ರಷ್ಟು ದುಬಾರಿಯಾಗಿದೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ಸಂಪೂರ್ಣ ಮದ್ಯ ತಯಾರಿಕೆ ಮತ್ತು ಮಾರಾಟ ಬಂದ್ ಮಾಡಲಿ. ಇಲ್ಲವೇ ನೀರ ಮತ್ತು ಸಾರಾಯಿ ಜಾರಿಗೆ ತರಲಿ” ಎಂದು ಒತ್ತಾಯಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರತಿ ಬಾಟಲಿ ಮದ್ಯದ ಮೇಲೆ ಶೇ. 65ರಷ್ಟು ದುಬಾರಿಯಾ

“ಒಂದು ಕಡೆ ಮದ್ಯದ ದರ ಹೆಚ್ಚಿಸಿ, ಮತ್ತೊಂದು ಕಡೆ ಬಡವರಿಗೆ ಗ್ಯಾರಂಟಿ ಕೊಡುವುದಾದರೆ ನಮ್ಮ ಮಹಿಳೆಯರ ಸೌಭಾಗ್ಯಕ್ಕೆ ಯಾವ ಗ್ಯಾರಂಟಿ ಕೊಡುತ್ತೀರಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕಟಣೆಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X