ಚಿತ್ರದುರ್ಗ | ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ

Date:

Advertisements

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ದಿನೇದಿನೆ ಕರಡಿಗಳ ಉಪಟಳ ಹೆಚ್ಚಾಗಿದ್ದು, ಹಾಡ ಹಗಲೇ ಪಟ್ಟಣ, ಗ್ರಾಮ, ಮಠಗಳ ಬಳಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ.

ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು, ಮುಖ, ಕಣ್ಣು, ಕಿವಿ, ಎದೆ ಭಾಗಕ್ಕೆ ಪರಚಿ ಗಂಭೀರ ಗಾಯಗೊಳಿಸಿದೆ. ಯಾಲಕ್ಕಪ್ಪನಹಟ್ಟಿ ಸಮೀಪದ ಸಿದ್ದಪ್ಪನಬೆಟ್ಟದ ಬಳಿಯಿರುವ ಜಮೀನಿಗೆ ತೆರಳಿದ್ದ ವೇಳೆ ಕರಡಿ ಏಕಾಏಕಿ ದಾಳಿ ಮಾಡಿದೆ.

ಹೆರೂರು ಮೂಲದ ದಿನೇಶ್ ಎಂಬುವವರ ಮೇಲೆ ಹೊಸದುರ್ಗ ಪಟ್ಟಣಕ್ಕೆ ಸಮೀಪದ ಯಾಲಕ್ಕಪ್ಪನಹಟ್ಟಿ ಬಳಿ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ದಿನೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದಾರೆ.

Advertisements

ಹೊಸದುರ್ಗ ತಾಲೂಕಿನ ಬಹುತೇಕ ಭಾಗ ಗುಡ್ಡ ಬೆಟ್ಟ ಪ್ರದೇಶಗಳಿದ್ದರೂ ಗ್ರಾಮೀಣ ಭಾಗದಲ್ಲಿ ಆಗಾಗ ಕರಡಿಗಳು ಕಾಣಿಸಿಕೊಳ್ಳುವುದು, ರೈತರಿಗೆ ತೊಂದರೆ ಮಾಡುವುದು ನಡೆಯುತ್ತಲೇ ಇದೆ.

“ಈ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಅನೇಕ ಬಾರಿ ದೂರು ನೀಡಿ, ಕರಡಿಗಳು ಬಂದಾಗ ಮಾಹಿತಿ ನೀಡಿದರೂ ಕೂಡಾ ಅರಣ್ಯ ಇಲಾಖೆ ಕರಡಿಯನ್ನು ಹಿಡಿದು ದೂರ ಸಾಗಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಲೇ ದಿನೇಶ್ ಎಂಬುವವರ ಮೇಲೆ ಕರಡಿಯಿಂದ ದಾಳಿಯಾಗಿದೆ” ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ; ಅಧಿಕಾರಿಗಳ ಲಿಖಿತ ಭರವಸೆ

“ಹೊಸದುರ್ಗ ಪಟ್ಟಣದಲ್ಲಿರುವ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ವಾರಕ್ಕೊಮ್ಮೆಯಾದರೂ ಕರಡಿ ಕಾಣಿಸಿಕೊಳ್ಳುತ್ತಿವೆ. ಇಲ್ಲಿ ನಿತ್ಯ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರ ಮಾಡುವ ನಾಗರೀಕರು, ಮಠದ ಶಾಂತವೀರ ಸ್ವಾಮೀಜಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಸುರಕ್ಷತೆ ಕ್ರಮ ಕೈಗೊಳ್ಳಬೇಕು” ಎನ್ನುತ್ತಾರೆ ಮಠದ ಸಿಬ್ಬಂದಿ ಮತ್ತು ಸ್ಥಳೀಯರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X