ಚಿತ್ರದುರ್ಗ | ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ವಸೂಲಿ; ಅಧಿಕಾರಿಗಳ ದಾಳಿ

Date:

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೇಂದ್ರಗಳ ಲಾಗಿನ್ ಐಡಿ ದುರ್ಬಳಕೆ ಮಾಡಿಕೊಂಡು, ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆಯುತ್ತಿರುವ ಕಂಪ್ಯೂಟರ್ ಸೆಂಟರ್‌ಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ, ಕಂಪ್ಯೂಟರ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿದೆ. ಇದಕ್ಕೆ ಸಹಕರಿಸಿದವರ ಲಾಗಿನ್ ಐಡಿಗಳನ್ನು ರದ್ದುಮಾಡಲಾಗಿದೆ.

- Advertisement -

ಈ ಕುರಿತು ವರದಿ ಮತ್ತು ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಹೊಸದುರ್ಗ ಪುರಸಭೆ ಮುಖ್ಯ ಅಧಿಕಾರಿ, ಸಿಡಿಪಿಒ, ಪೊಲೀಸ್, ಹೊಸದುರ್ಗ ಟೌನ್ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕರ ತಂಡ ಹೊಸದುರ್ಗ ಪಟ್ಟಣದ ಖಾಸಗಿ ಕಂಪ್ಯೂಟರ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ದಾಳಿಯ ವೇಳೆ ಹೊಸದುರ್ಗ ಪಟ್ಟಣದ ಜೈನ್‌ ದೇವಸ್ಥಾನ ಬಳಿಯ ಜನಸ್ನೇಹಿ ಕಂಪ್ಯೂಟರ್, ಎಸ್‌ಜೆಎಂ ಬಡಾವಣೆಯ ಮಾರುತಿ ನರ್ಸಿಂಗ್ ಹೋಂ ಹತ್ತಿರದ ಸ್ಪೂರ್ತಿ ಆನ್‌ಲೈನ್ ಸೆಂಟರ್‌, ಅಜ್ಜಂಪುರ ರಸ್ತೆಯ ವೈಷ್ಣವಿ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿ ಹಣ ಪಡೆಯುತ್ತಿರುವುದು ಕಂಡುಬಂದಿದೆ.

ಈ ಹಿನ್ನೆಲೆ ಕ್ರಮ ಕೈಗೊಂಡು ಕಂಪ್ಯೂಟರ್ ಸೆಂಟರ್‌ಗಳಿಗೆ ಮುಟ್ಟುಗೋಲು ಹಾಕಿದ್ದು, ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಗಳನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ದಾಳಿ ಮಾಹಿತಿ ಗೊತ್ತಾದ ಬಳಿಕ ಪಟ್ಟಣದ‌ ಹಲವು ಕಂಪ್ಯೂಟರ್ ಮಾಲೀಕರು ಅಂಗಡಿ ಮುಚ್ಚಿ ಪರಾರಿಯಾಗಿದ್ದಾರೆ. ಈ ಸೆಂಟರ್‌ಗಳನ್ನು ಸೀಜ್ ಮಾಡಲಾಗಿದೆ.

ಅಕ್ರಮವಾಗಿ ಲಾಗಿನ್ ಐಡಿ ಬಳಕೆ

ಪ್ರಕರಣಗಳಲ್ಲಿ ಸರ್ಕಾರದಿಂದ ಲಾಗಿನ್ ಐಡಿ ಪಡೆದ ವ್ಯಕ್ತಿಗಳು ಖಾಸಗಿ ಕಂಪ್ಯೂಟರ್ ಸೆಂಟರ್‌ಗಳಿಗೆ ಲಾಗಿನ್ ಐಡಿ ನೀಡಿದ್ದಾರೆ. ಇದು ಅಪರಾಧ ಕೃತ್ಯವಾಗಿದೆ. ಜನಸ್ನೇಹಿ ಕಂಪ್ಯೂಟರ್ ಸೆಂಟರ್‌ನಲ್ಲಿ ಕಬ್ಬಳ ಗ್ರಾಮ ಕೇಂದ್ರದ ಲಾಗಿನ್ ಐಡಿ, ಸ್ಪೂರ್ತಿ ಆನ್‌ಲೈನ್‌ ಸೆಂಟರ್‌ನಲ್ಲಿ ಆನಿವಾಳ ಗ್ರಾಮ ಒನ್ ಕೇಂದ್ರ ಲಾಗಿನ್ ಐಡಿ ಹಾಗೂ ವೈಷ್ಣವಿ ಕಂಪ್ಯೂಟರ್ ಸೆಂಟರ್‌ನಲ್ಲಿ ದೊಡ್ಡಘಟ್ಟ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ಬಳಸಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಗ್ರಾಮ್ ಒನ್‌ ಕೇಂದ್ರಗಳ ನೋಂದಣಿ ಲಾಗಿನ್ ಐಡಿಯನ್ನು ನಿರ್ಬಂಧಿಸಿ, ಕಪ್ಪುಪಟ್ಟಿ(ಬ್ಲ್ಯಾಕ್ ಲಿಸ್ಟ್‌)ಗೆ ಸೇರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; 3 ಸೈಬರ್‌ ಕೇಂದ್ರಗಳ ವಿರುದ್ಧ ಎಫ್‌ಐಆರ್

ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ಪಡೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ನೊಂದಣಿ ಸುಗಮವಾಗಿ ನೆರವೇರುತ್ತಿದೆ. ಗ್ರಾಮಗಳಲ್ಲಿ ಗ್ರಾಮ ಒನ್, ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ನೋಂದಣಿ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...