ಚಿತ್ರದುರ್ಗ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎದುರೇ ಕಿತ್ತಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Date:

ಕಾರ್ಯಕರ್ತರ ಅಳಲು ಸಮಸ್ಯೆಗಳನ್ನು ಹೇಳಲು ಬಿಡದೆ ನಾಯಕರು ತಡೆದಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎದುರೇ ಕೈ ಕಾರ್ಯಕರ್ತರು ತಳ್ಳಾಟ ವಾಗ್ಯುದ್ಧ ಚಿತ್ರದುರ್ಗದಲ್ಲಿ ನೆಡೆದಿದೆ.

- Advertisement -

ವಿವಿಧ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡು ಸಭೆಯನ್ನು ಏರ್ಪಡಿಸಿದ್ದರು. ಸಭೆಯಲ್ಲಿ ಕಾರ್ಯಕರ್ತರ ಅಹವಾಲು ಸಚಿವರ ಮುಂದೆ ಹೇಳಲು ಬಿಡದ ಕಾರಣ ನೂಕಾಟ ವಾಗ್ವಾದ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಸಚಿವೆ ಇದ್ದ ವೇದಿಕೆಯಲ್ಲಿ ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀಕಾಂತ್ ಮಾತನಾಡುತ್ತಾ, ರಾಜ್ಯದಲ್ಲಿ ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಾರ್ಯಕರ್ತರದು ನಾಯಿ ಪಾಡಾಗಿದೆ. ನಮ್ಮ ಸಮಸ್ಯೆಗಳನ್ನು ಕೇಳುವವರು ಯಾರು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ, ವೇದಿಕೆ ಮೇಲಿದ್ದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ, ಮಾತನಾಡಲು ಬಿಡದೆ ಮೈಕ್ ಕಿತ್ತುಕೊಳ್ಳಲು ಪ್ರಯತ್ನಿಸಿದರು. ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಯಿತು.

WhatsApp Image 2024 09 02 at 4.36.10 PM

ಈ ವೇಳೆ ಕಾರ್ಯಕರ್ತರ ಬೆಂಬಲಿಗರ ಮಧ್ಯೆ ನೂಕಾಟ ವಾಗ್ವಾದ ನಡೆದು ಮಧ್ಯೆ ಪ್ರವೇಶಿಸಿದ ಇತರ ಮುಖಂಡರು ಸಚಿವರು ವಾತಾವರಣ ತಿಳಿಗೊಳಿಸಿದರು.

ನಂತರ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಜಿಲ್ಲೆಗೆ ಆಗಮಿಸಿದಾಗ ನೀವು ನನಗೆ ನೀಡಿದ ಅದ್ದೂರಿಯ ಸ್ವಾಗತವನ್ನು ನೋಡಿ ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಸಭೆಯಲ್ಲಿ ನಡೆದ ಈ ಒಂದು ಸಣ್ಣ ಘಟನೆ ಹೊರಗೆ ತಪ್ಪು ಸಂದೇಶ ನೀಡಲಿದೆ. ಬೇರೆ ಎಲ್ಲವೂ ಮರೆತು ಹೋಗಿ ಇದೊಂದು ಸಣ್ಣ ಗಲಾಟೆಯ ಘಟನೆಯೇ ಮಾಧ್ಯಮಗಳಲ್ಲಿ ರಾರಾಜಿಸುತ್ತದೆ. ನಿಮ್ಮ ಅಹವಾಲುಗಳು ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳೋಣ. ನಿಮ್ಮ ಸಮಸ್ಯೆಗಳನ್ನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುತ್ತೇನೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಧಾರವಾಡ-ಹುಬ್ಬಳ್ಳಿ | ಚೌತಿ, ಮೀಲಾದುನ್ನಬಿ: ರೌಡಿಶೀಟರ್‌ಗಳ ಪರೇಡ್ ನಡೆಸಿದ ಕಮಿಷನರ್ ಶಶಿಕುಮಾರ್

ಸಭೆಯಲ್ಲಿ ಜಿಲ್ಲಾಧ್ಯಕ್ಷ ತಾಜ್ ಪೀರ್, ಕಾರ್ಯಧ್ಯಕ್ಷ ಹಾಲಸ್ವಾಮಿ, ಮುರಳಿಧರ್ ಹಾಲಪ್ಪ, ಟಿ ರಘು, ಮೋಕ್ಷ ರಾಣಿ, ಮೆಹಬೂಬ್ ಖಾನ್ ಇತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...