ಕೇವಲ ಒಂದು ಬಿರಿಯಾನಿಗಾಗಿ ಮತಾಂತರ: ಬಿಜೆಪಿ ಸಚಿವ ನಾರಾಯಣಸ್ವಾಮಿಯ ಆಕ್ಷೇಪಾರ್ಹ ಹೇಳಿಕೆ

Date:

Advertisements

ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ, ಜಿಲ್ಲೆಯ ಜನರಲ್ಲಿ ಅಸಮಾಧಾನ ಹುಟ್ಟುಹಾಕಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು ನಡೆಯುತ್ತಿವೆ ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದರು. ಇದೀಗ, ಅವರ ಆರೋಪವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ, ಜಿಲ್ಲೆಯ ಜನರು ಬಿರಿಯಾನಿಗಾಗಿ ಮತಾಂತರವಾಗುತ್ತಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

“ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಶೇ.30ರಷ್ಟು ಮತಾಂತರ ಪ್ರಕ್ರಿಯೆ ನಡೆದಿದೆ. ಕರ್ನಾಟಕದ ಜಿತ್ರದುರ್ಗ ಜಿಲ್ಲೆಯಲ್ಲಿಯೂ ಮತಾಂತರ ನಡೆಯುತ್ತಿದ್ದು, ನಮ್ಮ ಮಾದಿಗ ಸಮುದಾಯದ ಜನರನ್ನು ಮತಾಂತರಗೊಳಿಸಲಾಗುತ್ತಿದೆ. ಅವರು ಆರ್ಥಿಕವಾಗಿ ಹಿಂದುಳಿದಿರುವುದನ್ನೇ ದುರ್ಲಾಭ ಮಾಡಿಕೊಳ್ಳಲಾಗುತ್ತಿದೆ. ಅದು ಯಾವ ಮಟ್ಟಕ್ಕಿದೆ ಎಂದರೆ, ಒಂದು ಬಿರಿಯಾನಿ ಕೊಟ್ಟರೂ ಸಾಕು ಜನರು ಮತಾಂತರವಾಗುತ್ತಾರೆ” ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

Advertisements

“ಮತಾಂತರದಿಂದ ಯಾರೂ ಸಮಾಜದಲ್ಲಿ ಮುನ್ನೆಲೆಗೆ ಬರಲು ಸಾಧ್ಯವಿಲ್ಲ. ಅದನ್ನು ಅರಿತೇ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈಗ, ಆ ಕಾಯ್ದೆಯನ್ನು ಕಾಂಗ್ರೆಸ್‌ ಕಿತ್ತಾಕಲು ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ನಿಮ್ಮಂತ ಲೀಡರಗಳು ಸಮಾಜದ ಹೆಸರು ಹೇಳಿಕೊಂಡು ದೊಡ್ಡ ದೊಡ್ಡ ಹುದ್ದೆಗೆ ಹೋದಮೇಲೆ ಹಿಂದಕ್ಕೆ ತಿರುಗಿ ನೋಡದಿರುವುದರಿಂದ ಹಾಗೂ ದಲಿತರಿಗೆ ಎಷ್ಟೋ ಗ್ರಾಮಗಳಲ್ಲಿ ಮಂದಿರ ಪ್ರವೇಶವಿಲ್ಲಾ ಅದಕ್ಕೆ ನಿವೇನು ಮಾಡಿದ್ದೀರಿ ಸಾಹೇಬ್ರೆ ನಿಮಗೆ ಮಂದಿರ ಪ್ರವೇಶ ಮಾಡಲು ಬಿಟ್ಟಿಲ್ಲಾ .
    ಇಷ್ಟಾದರೂ ನಿಮಗೆ ತಿಳಿಯೋದಿಲ್ಲ ಅಂದರೆ ದುರಂತವೇ ಸರಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X