ಚಿತ್ರದುರ್ಗ | ಸ್ಮಶಾನ ಭೂಮಿ ಒತ್ತುವರಿ ತೆರವಿಗೆ ದಸಂಸ ಆಗ್ರಹ

Date:

Advertisements

ಕೊಂಡಾಪುರ ಗ್ರಾಮದ ಸರ್ವೆ ನಂಬರ್ 22ರಲ್ಲಿ 2.34 ಎಕರೆ ಸರ್ಕಾರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಲಾಗಿದೆ. ಆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದ್ದು, ಹೊಳಲ್ಕೆರೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, “ಸುಮಾರು ಎರಡ್ಮೂರು ತಲೆಮಾರುಗಳಿಂದ ಈ ಜಾಗದಲ್ಲಿ ಎಸ್‌ಸಿ ಜನಾಂಗದವರು ಸ್ಮಶಾನವನ್ನು ಮಾಡಿಕೊಂಡು ತಮ್ಮ ಹಿರಿಯರನ್ನು ಅಲ್ಲಿಯೇ ಶವ ಸಂಸ್ಕಾರ ಮಾಡುತ್ತಾ ಬಂದಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕೊಂಡಾಪುರ ಗ್ರಾಮದ ಕೆಲ ರೈತರುಗಳು ಈ ಜಾಗವನ್ನು ಒತ್ತುವರಿ ಮಾಡಿದ್ದಾರೆ” ಎಂದು ಆರೋಪಿಸಿದರು.

“ಈ ವಿಷಯ ಸಂಬಂಧ ತಹಶೀಲ್ದಾರ್ ಮತ್ತು ಪೊಲೀಸ್ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಈಗ ಶವಸಂಸ್ಕಾರ ಮಾಡಲು ಒಂದು ಗೆರೆ ಕೂಡ ಜಾಗ ಇಲ್ಲದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಭೂಮಾಪನ ಇಲಾಖೆಯ ಸರ್ವೇಯರ್ ಕಳುಹಿಸಿ ಸ್ಥಳ ಪರಿಶೀಲಿಸಿ ಸರ್ವೆ ನಂಬರ್ 22ರ ಸರ್ಕಾರಿ ಜಾಗವನ್ನು ಬಿಡಿಸಿಕೊಟ್ಟು, ಈ ಜಾಗವನ್ನು ಎಸ್‌ಸಿ ರುದ್ರ ಭೂಮಿಯಾಗಿ ಮೀಸಲಿಟ್ಟು ಅಭಿವೃದ್ಧಿ ಮಾಡಿಕೊಡಬೇಕು. ಹಾಗಾಗಿ ತಾವುಗಳು ಕೂಡಲೇ ಮಧ್ಯ ಪ್ರವೇಶಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಘರ್ಷ ಸಮಿತಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಒತ್ತುವರಿದಾರರಿಂದ ನಮಗೆ ತೊಂದರೆಯಾಗುತ್ತಿದ್ದು, ಶವ ಸಂಸ್ಕಾರಕ್ಕೆ ಜಾಗವಿಲ್ಲದಂತಾಗಿದೆ. ಅವರಿಂದ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ಬಿಡಿಸಿಕೊಟ್ಟು ಶವ ಸಂಸ್ಕಾರಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ದಸಂಸ ಮುಖಂಡ ಕೆಂಗುಂಟೆ ಜಯಣ್ಣ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಮನವಿ ಸ್ವೀಕರಿಸಿ ಮಾತನಾಡಿ, “ಭೂಮಾಪನ ಇಲಾಖೆಯಲ್ಲಿ ಸರ್ವೆಯರ್‌ಗಳ ಸಂಖ್ಯೆ ಕಡಿಮೆ ಇದೆ. ಶೀಘ್ರದಲ್ಲಿ ಅಳತೆ ನಡೆಸುವಂತೆ ಹೇಳಿದ್ದೇನೆ. ಜಾಗವನ್ನು ಗುರುತಿಸಿದ ಬಳಿಕ ಕ್ರಮ ಕೈಗೊಂಡು ಸ್ಮಶಾನಕ್ಕೆ ಜಾಗ ಕೊಡಿಸಲು ತಾಲೂಕು ಆಡಳಿತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ತಾಲೂಕು ಸಂಚಾಲಕ ಕೆ ಆರ್‌ ಸುಂದರ ಮೂರ್ತಿ, ವಿಜಯಕುಮಾರ್ ಮೂರ್ತಪ್ಪ, ನವೀನ್ ಮದ್ದೇರು, ಎನ್ ಪ್ರಭಾಕರ್, ವಿಜಯ್, ಶಿವಮೂರ್ತಿ, ಕರಿಯಪ್ಪ, ಮಂಜುನಾಥ, ಸಂಗಪ್ಪ, ವೆಂಕಟೇಶ್, ರಮೇಶ್, ರಘು ಹಾಗೂ ಕೊಂಡಾಪುರ ಗ್ರಾಮಸ್ಥರು, ದಲಿತ ಸಂಘರ್ಷ ಸಮಿತಿಯ ಸದಸ್ಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X