ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

Date:

Advertisements

ಹೊಸದಾಗಿ ಬರುವಂತಹ ಆಟೋಗಳಿಗೆ ಆರ್‌ಟಿಒ ಇಲಾಖೆ ಪರವಾನಗಿ(ಪರ್ಮಿಟ್) ನೀಡಬಾರದು. ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮತ್ತು ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದರು.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ವಾಸವಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿದ, ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ಪರವಾನಗಿ ಇಲ್ಲದಿರುವ ಹೊರ ಪರವಾನಗಿ ಹೊಂದಿರುವ ಆಟೋಗಳನ್ನು ಹಿಡಿದು ಹಾಕಬೇಕು. ಆಟೋ ಚಾಲಕರ ಸಂಘಟನೆಗಳು ನಿಗದಿ ಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಜಿಲ್ಲಾ ಆಡಳಿತ ಈ ಕೂಡಲೇ ನಿರ್ಮಿಸಿಕೊಡಬೇಕು. ಹಳ್ಳಿಗಳಿಗೆ ಸೀಟು ಹೊಡೆಯುವ ಆಪೇ ಆಟೋಗಳನ್ನು ಈ ಕೂಡಲೇ ನಗರದಿಂದ ಬಹಿಷ್ಕರಿಸಬೇಕು, ರಾಜ್ಯಸರ್ಕಾರದಿಂದ ಬರುವ ಆಶ್ರಯ ಮನೆ ಯೋಜನೆಯಡಿಯಲ್ಲಿ ನಿರ್ಗತಿಕ ಆಟೋಚಾಲಕರಿಗೆ ಕಡ್ಡಾಯವಾಗಿ ಆಶ್ರಯ ಮನೆ ನೀಡಬೇಕು. ನಗರಸಾರಿಗೆ ಬಸ್ಸುಗಳಿಗೆ ನಿಗಧಿತ ಸಮಯ, ಸ್ಥಳ ಕಡ್ಡಾಯವಾಗಿ ಕೂಡಲೇ ನಿಗಧಿಪಡಿಸಬೇಕು” ಎಂದು ಒತ್ತಾಯಿಸಿದರು

Advertisements

“ಕಳೆದ 20 ವರ್ಷಗಳಿಂದ ಹಲವು ಆಟೋ ಸಂಘಟನೆಗಳು ಹೋರಾಟ ಮಾಡುತ್ತಾ ಮನವಿ ಸಲ್ಲಿಸಿದ್ದರೂ ಕೂಡ ಈ ಹಿಂದೆ ಇದ್ದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ತಾವು ಮುಂದಿನ 15 ದಿನಗಳೊಳಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

“ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನು ನೀಡಿದರು.

ಈ ವೇಳೆ ಆಟೋ ಚಾಲಕ ಸಂಘಟನೆ ಒಕ್ಕೂಟದ ಬಹುತೇಕ ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X