ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

Date:

ಹೊಸದಾಗಿ ಬರುವಂತಹ ಆಟೋಗಳಿಗೆ ಆರ್‌ಟಿಒ ಇಲಾಖೆ ಪರವಾನಗಿ(ಪರ್ಮಿಟ್) ನೀಡಬಾರದು. ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮತ್ತು ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದರು.

- Advertisement -

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ವಾಸವಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿದ, ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪರವಾನಗಿ ಇಲ್ಲದಿರುವ ಹೊರ ಪರವಾನಗಿ ಹೊಂದಿರುವ ಆಟೋಗಳನ್ನು ಹಿಡಿದು ಹಾಕಬೇಕು. ಆಟೋ ಚಾಲಕರ ಸಂಘಟನೆಗಳು ನಿಗದಿ ಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಜಿಲ್ಲಾ ಆಡಳಿತ ಈ ಕೂಡಲೇ ನಿರ್ಮಿಸಿಕೊಡಬೇಕು. ಹಳ್ಳಿಗಳಿಗೆ ಸೀಟು ಹೊಡೆಯುವ ಆಪೇ ಆಟೋಗಳನ್ನು ಈ ಕೂಡಲೇ ನಗರದಿಂದ ಬಹಿಷ್ಕರಿಸಬೇಕು, ರಾಜ್ಯಸರ್ಕಾರದಿಂದ ಬರುವ ಆಶ್ರಯ ಮನೆ ಯೋಜನೆಯಡಿಯಲ್ಲಿ ನಿರ್ಗತಿಕ ಆಟೋಚಾಲಕರಿಗೆ ಕಡ್ಡಾಯವಾಗಿ ಆಶ್ರಯ ಮನೆ ನೀಡಬೇಕು. ನಗರಸಾರಿಗೆ ಬಸ್ಸುಗಳಿಗೆ ನಿಗಧಿತ ಸಮಯ, ಸ್ಥಳ ಕಡ್ಡಾಯವಾಗಿ ಕೂಡಲೇ ನಿಗಧಿಪಡಿಸಬೇಕು” ಎಂದು ಒತ್ತಾಯಿಸಿದರು

“ಕಳೆದ 20 ವರ್ಷಗಳಿಂದ ಹಲವು ಆಟೋ ಸಂಘಟನೆಗಳು ಹೋರಾಟ ಮಾಡುತ್ತಾ ಮನವಿ ಸಲ್ಲಿಸಿದ್ದರೂ ಕೂಡ ಈ ಹಿಂದೆ ಇದ್ದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ತಾವು ಮುಂದಿನ 15 ದಿನಗಳೊಳಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

“ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನು ನೀಡಿದರು.

ಈ ವೇಳೆ ಆಟೋ ಚಾಲಕ ಸಂಘಟನೆ ಒಕ್ಕೂಟದ ಬಹುತೇಕ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...