ಚಿತ್ರದುರ್ಗ | ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದ ಸರ್ಜನ್ ಡಾ. ಸಾಲಿ ಮಂಜಪ್ಪ ಅಮಾನತು

Date:

Advertisements

ರೋಗಿಯೋರ್ವರ ಶಸ್ತ್ರಚಿಕಿತ್ಸೆಗಾಗಿ 4 ಸಾವಿರ ಲಂಚ ಪಡೆದಿದ್ದ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ, ರಾಜ್ಯ ಆರೋಗ್ಯ ಇಲಾಖೆ ಜುಲೈ 28ರಂದು ಆದೇಶ ಹೊರಡಿಸಿದೆ.

ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲಾ ಆಸ್ಪತ್ರೆಯ ಸರ್ಜನ್ ಲಂಚ ಪಡೆದಿರುವ ವಿಡಿಯೋವೊಂದು ಕೆಲದಿನಗಳ ಹಿಂದೆ ವೈರಲ್ ಆಗಿತ್ತು.

ಜಿಲ್ಲಾ ಸರ್ಜನ್ ಡಾ. ಸಾಲಿ ಮಂಜಪ್ಪ ಅವರು ರೋಗಿಯ ಸಂಬಂಧಿ ಬಳಿ, 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 4 ಸಾವಿರ ಹಣ ಪಡೆದಿದ್ದಾರೆ. ಲಂಚ ಪಡೆಯುತ್ತಿರುವ ದೃಶ್ಯವನ್ನು ರೋಗಿಯ ಸಂಬಂಧಿ ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದರು. ಅದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಬಳಿಕ ರಾಜ್ಯ ಆರೋಗ್ಯ ಇಲಾಖೆಯು ಜುಲೈ 28ರಂದು ಸೇವೆಯಿಂದ ಅಮಾನತುಗೊಳಿಸಿ, ಆದೇಶ ಹೊರಡಿಸಿದೆ.

Advertisements
ಚಿತ್ರದುರ್ಗ ಜಿಲ್ಲಾಸ್ಪತ್ರೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ನಾಯಕರಹಟ್ಟಿ ಮೂಲದ ಚಂದ್ರಶೇಖ‌ರ್ ಎಂಬ ವ್ಯಕ್ತಿಯಿಂದ ಲಂಚ ಸ್ವೀಕರಿಸಿದ್ದರು. ಲಂಚ ಸ್ವೀಕರಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೂ ಕಾರಣವಾಗಿತ್ತು. ಕಳೆದ ಜುಲೈ 25 ರಂದು ಮಹಾನಾಯಕ ದಲಿತ ಸೇನೆಯು ಸರ್ಜನ್ ವಿರುದ್ಧ ಕ್ರಮ ಆಗ್ರಹಿಸಿ ಚಿತ್ರದುರ್ಗ ನಗರದಲ್ಲಿ ಜಿಲ್ಲಾಸ್ಪತ್ರೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು.

ಅಮಾನತು ಆದೇಶದಲ್ಲಿ ಏನಿದೆ?

ಚಿತ್ರದುರ್ಗ ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ. ಸಾಲಿ ಮಂಜಪ್ಪನವರು ಸಾರ್ವಜನಿಕ ಉಚಿತ ಸೇವೆಗಾಗಿ ಬರುವ ರೋಗಿಗಳ ಬಳಿ ಶಸ್ತ್ರಚಿಕಿತ್ಸೆಗಾಗಿ ಹಣದ ಬೇಡಿಕೆ ಇಟ್ಟು, ಸರ್ಕಾರಿ ವೈದ್ಯರ ಹುದ್ದೆಗೆ ತರವಲ್ಲದ ರೀತಿಯಲ್ಲಿ ವರ್ತಿಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದರ ವಿಡಿಯೋ ಚಿತ್ರೀಕರಣಗೊಂಡು ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದರಿಂದ ಇವರನ್ನು ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ.

ತಮ್ಮ ವ್ಯಾಪ್ತಿಯ ಅಧಿಕಾರವನ್ನು ಚಲಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಈ ಆದೇಶ ಹೊರಡಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಆರೋಪಿ ವೈದ್ಯರು ನಿಯಮಾನುಸಾರ ಜೀವನಾಂಶ ಭತ್ಯೆಗೆ ಅರ್ಹರಾಗಿರುವುದರಿಂದ ಅವರನ್ನು ಶಿವಮೊಗ್ಗ ಜಿಲ್ಲೆಯ ಸೊರಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಅಮಾನತಿನ ಅವಧಿಯಲ್ಲಿ ತಮ್ಮ ಕೇಂದ್ರ ಸ್ಥಾನವನ್ನು ಬಿಡುವುದಕ್ಕೂ ಮುನ್ನ ಪೂರ್ವಾನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X