ಚಿತ್ರದುರ್ಗ | ಶೈಕ್ಷಣಿಕ ಶುಲ್ಕ ಭರಿಸಲಾಗದೆ ವಿದ್ಯಾಭ್ಯಾಸ ಮೊಟಕು; ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀ ನೆರವು

Date:

Advertisements

ಶೈಕ್ಷಣಿಕ ಶುಲ್ಕವನ್ನು ಭರಿಸಲಾಗದೆ ವಿದ್ಯಾಭ್ಯಾಸ ಮುಂದುವರೆಸಲು ಕಂಗಾಲಾಗಿದ್ದ ವಿದ್ಯಾರ್ಥಿನಿಯರು ಮತ್ತವರ ಪೋಷಕರಿಗೆ ನೆರವು ನೀಡಿ, ಮಠದಿಂದ ಶುಲ್ಕವನ್ನು ಚಿತ್ರದುರ್ಗದ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳು ಶಿಕ್ಷಣಕ್ಕೆ ನೆರವಾಗಿದ್ದಾರೆ.

ತನ್ನ ಕಷ್ಟ ಕಾಲದಲ್ಲಿಯೂ ಮಗಳ ಸುಂದರ ಭವಿಷ್ಯಕ್ಕಾಗಿ ಹಗಲಿರುಳು ಬೀದಿಬದಿಯಲ್ಲಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ತುಮಕೂರು ಜಿಲ್ಲೆಯ ಶಿರಾ ತಾಲೂಕು ಗಿಣ್ಣಪ್ಪನಹಟ್ಟಿ ಗ್ರಾಮದ ಭೂತೇಶ ಹಾಗೂ ಭಾಗ್ಯ ದಂಪತಿಯ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಕಂಡಿದ್ದರು.

ಈ ದಿಸೆಯಲ್ಲಿ ಇವರ ಪುತ್ರಿ ಬಿ ಪ್ರಿಯಾ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.90ರಷ್ಟು ಅಂಕ ಪಡೆದು ಎಂಜಿನಿಯರ್ ಪದವಿಗೆ ನೋಂದಣಿಯಾಗಿದ್ದಾರೆ. ಸರ್ಕಾರ ಸ್ಕಾಲರ್ಶಿಪ್ ನೀಡುವ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಶೈಕ್ಷಣಿಕ ಶುಲ್ಕವನ್ನು ಕಟ್ಟಲು ಒತ್ತಡ ಹೇರುತ್ತಿದ್ದು, ಇವರ ವಿದ್ಯಾಭ್ಯಾಸಕ್ಕೆ ತಡೆಯೊಡ್ಡುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ ಎಸ್ ದ್ವಾರಕನಾಥ್ ನಾಮನಿರ್ದೇಶಕ್ಕೆ ಆಗ್ರಹ

ಇದರಿಂದ ಕಂಗಾಲಾದ ಪೋಷಕರು ದಾರಿ ಕಾಣದೆ ಚಿತ್ರದುರ್ಗದ ಭೋವಿ ಗುರುಪೀಠದ ಮೊರೆ ಹೋಗಿದ್ದರು. ಆರ್ಥಿಕ ಸಂಕಷ್ಟದ ಸಂದರ್ಭವನ್ನು ಕುಟುಂಬವು ನಿವೇದಿಸಿಕೊಂಡಾಗ ಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರು ಕಾಲೇಜಿಗೆ ₹1,10,000(ಒಂದು ಲಕ್ಷದ ಹತ್ತು ಸಾವಿರ) ನೀಡುವುದರ ಮೂಲಕ ಬಡಕುಟುಂಬದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X