ಚಿತ್ರದುರ್ಗ | ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿ: ಆರ್ ಕೆ ಸರ್ದಾರ್

Date:

Advertisements

ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ ಮದುವೆ ಮಾಡಬಾರದು ಅಥವಾ ಅವರು ಮಾಡಿಕೊಳ್ಳಬಾರದು. ಮಕ್ಕಳಿಗೆ ವಿದ್ಯೆಯನ್ನು ಕೊಡಿಸಿ ಛಲ ತುಂಬಬೇಕು. ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿಯಾಗಿದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕಾಂಗ್ರೆಸ್ ಮುಖಂಡ ಆರ್ ಕೆ ಸರ್ದಾರ್ ಕರೆ ನೀಡಿದರು.

ಚಿತ್ರದುರ್ಗದಲ್ಲಿ ಸೆಪ್ಟಂಬರ್‌ 10ರಂದು ಟಿಪ್ಪು ಸ್ಪೋರ್ಟ್ಸ್ ಕ್ಲಬ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕಾಯಿದೆ ಹಾಗೂ ಮಹಿಳೆಯರು, ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಕ್ಕಳಿಗೆ ಮದುವೆ ಮುಖ್ಯವಲ್ಲ. ವಿದ್ಯಾಭ್ಯಾಸ ಮುಖ್ಯವಾಗಿರುತ್ತದೆ. ಉತ್ತಮ ವಿದ್ಯಾಭ್ಯಾಸದ ನಂತರ ವಯಸ್ಕರಾದ ಮೇಲೆ ಮದುವೆ ಮಾಡಬೇಕು” ಎಂದು ಕರೆ ನೀಡಿದರು.

Advertisements

“ನಮ್ಮ ರಾಷ್ಟ್ರ ಭಾರತ, ಬೇರೆ ಯಾವುದೋ ದೇಶವಲ್ಲ. ನಮ್ಮ ಭಾರತದ ಕಾನೂನಿಗೆ ವಿರುದ್ಧವಾಗಿ ನೆಡೆದರೆ, ಬಾಲ್ಯವಿವಾಹ, ಅನೈತಿಕ ಚಟುವಟಿಕೆಗಳಾದರೆ ಕಾನೂನಿನ ನಿಟ್ಟಿನಲ್ಲಿ ಕ್ರಮ ಜರುಗಿಸುವುದು ಖಚಿತ. ಧರ್ಮ ಜೀವನದ ಒಂದು ಭಾಗವಷ್ಟೆ. ಹಿಂದಿನ ಕಾಲದ ಜನರು ವಿದ್ಯೆ ಇಲ್ಲದಂತೆ ಮಕ್ಕಳನ್ನು ಬೆಳೆಸುವ ಅನಿವಾರ್ಯತೆ, ಸಂದರ್ಭ ಇತ್ತು. ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಎಲ್ಲರಿಗೂ ಶಿಕ್ಷಣ ದೊರೆಯುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರ; ಸೆ.15ರಂದು ಚಾಲನೆ

ಕಾರ್ಯಕ್ರಮದಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಅಮ್ಜದ್, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ ಪೀರ್, ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಅಲಿ, ಮಹಾಬೂಬ ಖಾನ್, ರಹಮತುಲ್ಲಾ, ನಗರ ಸಭೆ ಸದಸ್ಯ ನಸ್ರು, ಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X