ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

Date:

Advertisements

ರಾತ್ರಿ ವೇಳೆ ಜಮೀನುಗಳಲ್ಲಿ ವಾಸಿಸುವ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು.

“ರಾಜ್ಯಾದ್ಯಂತ ಲಕ್ಷಾಂತರ ರೈತರು ತಮ್ಮ ಜಮೀನುಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ಪಂಪ್‌ಸೆಟ್‌ಗಳಿಗೆ ತಮ್ಮ ಇಲಾಖೆಯಿಂದ ವಿದ್ಯುತ್‌ ಪಡೆದಿದ್ದು ಕೃಷಿ ಪಂಪ್‌ಸೆಟ್‌ ನೀರು ಬಳಸಿಕೊಂಡು ತೆಂಗು, ಅಡಕೆ, ಮಾವು, ದಾಳಿಂಬೆ, ಪಪ್ಪಾಯಿ ಸೇರಿದಂತೆ ಇತರೆ ತೋಟಗಾರಿಕೆ ಬೆಳೆ ಮತ್ತು ಅಲ್ಪಾವಧಿ ಬೆಳೆಗಳಾದ ಶೇಂಗಾ, ರಾಗಿ, ಜೋಳ, ಭತ್ತ, ನವಣೆ, ಮೆಕ್ಕೆಜೋಳ, ತರಕಾರಿ ಬೆಳೆ, ಹೂವು, ಹಣ್ಣು ಇತ್ಯಾದಿ ಮರ ಗಿಡಗಳನ್ನು ಬೆಳೆದು ಜತೆಗೆ ಪಶುಸಂಗೋಪನೆ, ಕುರಿ, ಮೇಕೆ, ಹಸು, ಎತ್ತು, ಎಮ್ಮೆ, ಕೋಳಿ ಇತ್ಯಾದಿ ಹೈನುಗಾರಿಕೆ ಉಪಕಸುಬಾಗಿ ಸಾಕಾಣಿಕೆ ಮಾಡುತ್ತಿದ್ದು, ಅವುಗಳ ರಕ್ಷಣೆಗೆ ರೈತರು ತಮ್ಮ ಜಮೀನುಗಳಲ್ಲಿ ವಾಸಿಸುತ್ತಾರೆ. ಆದರೆ ರಾತ್ರಿ ಸಮಯದಲ್ಲಿ ಕಾಡು ಮೇಡು, ಹೊಲಗದ್ದೆ, ತೋಟಗಳಲ್ಲಿ ವಾಸಿಸುತ್ತಿದ್ದವರು ಸಮರ್ಪಕ ವಿದ್ಯುತ್‌ ಬೆಳಕಿಲ್ಲದೆ ಸಿಂಗಲ್‌ ಫೇಸ್ (ಓಪನ್‌ಡೆಲ್ವಾ) ವಿದ್ಯುತ್‌ನಿಂದ ಜೀವನ ಸಾಗಿಸುತ್ತಿದ್ದಾರೆ” ಎಂದರು.

“ರೈತರಿಗೆ ಮಾಹಿತಿ ನೀಡದೆ ರಾತ್ರಿ ಸಮಯದಲ್ಲಿ ಏಕಾಏಕಿ ಸಿಂಗಲ್ ಫೇಸ್ ವಿದ್ಯುತ್ ನಿಲುಗಡೆ ಮಾಡಿದ್ದು, ಇದರಿಂದ ತೋಟದಲ್ಲಿ ವಾಸಿಸುವ ರೈತರು ಆತಂತಕ್ಕೆ ಈಡಾಗಿದ್ದಾರೆ. ಕೊಲೆ, ದರೋಡೆ, ಸುಲಿಗೆ, ಕಳ್ಳಕಾಕರ ಹಾವಳಿ ಹೆಚ್ಚಾಗುವುದರಿಂದ ರೈತರು ರಾತ್ರಿ ಸಮಯದಲ್ಲಿ ವಾಸಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಈ ಪದ್ಧತಿಯನ್ನು ನಿಲ್ಲಿಸಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

ಮುಖಂಡ ಹೊರಕೇರಪ್ಪ ಮಾತನಾಡಿ, “ಇಂದು ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಮತ್ತೆ ಸಿಂಗಲ್ ಫೇಸ್ ವಿದ್ಯುತ್‌ ಸ್ಥಗಿತಗೊಂಡಲ್ಲಿ ಸೆಪ್ಟಂಬರ್‌ 18ರಂದು ಜಿಲ್ಲೆಯ ಕ್ಯಾದಿಗೆರೆ ಟೈಪಾನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಆನೇಕ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ಶಿವಕುಮಾರ್, ತಿಪ್ಪೇಸ್ವಾಮಿ, ಶ್ರೀನಿವಾಸ್ ದಸ್ತಗಿರಿ ಸಾಬ್, ಚೇತನ್ ಯಳ್ನಾಡು, ವಿನಯ್, ರಂಗಸ್ವಾಮಿ, ಅಂಜನಮೂರ್ತಿ, ಆರ್ ವಿ ಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X