ಚಿತ್ರದುರ್ಗ | ಇಲಾಖೆಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ: ಕ್ರಮಕ್ಕೆ ಆಗ್ರಹಿಸಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Date:

Advertisements

ತಾಲೂಕಿನ ವಿವಿಧ ಇಲಾಖೆಗಳಲ್ಲಿ ಮಿತಿಮೀರಿರುವ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರ್ಲಕ್ಷತನ ವಿರೋಧಿಸಿ ವಿವಿಧ ಇಲಾಖೆಗಳಿಗೆ ಕ್ರಮ ಕೈಗೊಳ್ಳಲು ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿಸದ ಸರ್ಕಾರದ ಮತ್ತು ಇಲಾಖೆಗಳ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಾಲೂಕು ಕಚೇರಿ ಮುಂಭಾಗದಲ್ಲಿ ನವೆಂಬರ್ 13ರಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿಯ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ತಾಲೂಕಿನಲ್ಲಿ ಕಂದಾಯ, ನೀರಾವರಿ, ಕೃಷಿ, ವಿದ್ಯುತ್ ಸೇರಿದಂತೆ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಅಧಿಕಾರಿಗಳು ರೈತರ, ಸಾರ್ವಜನಿಕರ ಕೆಲಸಕ್ಕೆ ಸ್ಪಂದಿಸುತ್ತಿಲ್ಲ, ಲಂಚದ ಬೇಡಿಕೆಗಳು ಮಿತಿಮೀರಿದೆ. ಇದರಿಂದಾಗಿ ಸಾಮಾನ್ಯ ಜನರು ಮತ್ತು ರೈತರು ರೋಸಿ ಹೋಗಿದ್ದಾರೆ” ಎಂದು ಕಿಡಿಕಾರಿದರು.

ಈ ಬಗ್ಗೆ ಒಂಭತ್ತು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಕ್ರಮ ಕೈಗೊಳ್ಳಲು ರೈತ ಸಂಘದ ವತಿಯಿಂದ ಮನವಿ ನೀಡಿ ಒತ್ತಾಯಿಸಲಾಗಿತ್ತು. ಆದರೆ ಯಾವುದೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸದೆ ನಿರ್ಲಕ್ಷಿತನ ತೋರಿ ಯಾವುದೇ ಕ್ರಮ ಕೈಗೊಂಡಿಲ್ಲ. ಅವರ ನಿರ್ಲಕ್ಷತನದ ವಿರುದ್ಧ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ಒಂಬತ್ತು ಇಲಾಖೆಗಳ ಸಚಿವರು ಧರಣಿಯ ಸ್ಥಳಕ್ಕೆ ಬಂದು ನಮ್ಮ ಮನವಿ ಆಲಿಸಿ, ಕ್ರಮ ಕೈಗೊಳ್ಳುವವರೆಗೂ ನಾವು ಅನಿರ್ದಿಷ್ಟಾವಧಿ ಧರಣಿಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

Advertisements

“ಮೂವತ್ತು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರ ಜಮೀನುಗಳಿಗೆ ಹಕ್ಕುಪತ್ರಕ್ಕೆ ಒತ್ತಾಯಿಸಿ, ಪಿ ಎನ್ ಸಿ ಕಂಪನಿಯು ಕೃಷಿ ಭೂಮಿಯಲ್ಲಿ ಅಕ್ರಮವಾಗಿ 8 ರಿಂದ 10 ಅಡಿವರೆಗೆ ಗುಂಡಿಗಳನ್ನು ತೋಡಿ ಮಣ್ಣು ಸಾಗಿಸಿರುವ ಬಗ್ಗೆ, ಅರಣ್ಯ ಇಲಾಖೆಯ ಗಿಡ ನೆಡುವ ಕಾರ್ಯಕ್ರಮದ ವೈಫಲ್ಯದ ಹಾಗೂ ತಪ್ಪು ಲೆಕ್ಕದ ಬಗ್ಗೆ, ಭದ್ರಾ ಮೇಲ್ದಂಡೆ ಯೋಜನೆಯ ಹನಿ ನೀರಾವರಿಯ ಅಕ್ರಮ ಮತ್ತು ಕಳಪೆ ಕಾಮಗಾರಿ ಬಗ್ಗೆ , ತೋಟಗಾರಿಕೆ ಇಲಾಖೆಯ ಅಕ್ರಮಗಳು ಮತ್ತು ವಿದ್ಯುತ್ ಇಲಾಖೆಯ ವ್ಯಾಪಕ ಭ್ರಷ್ಟಾಚಾರ, ಅಕ್ರಮ ಸಕ್ರಮ ಯೋಜನೆಯಲ್ಲಿ ಕಾರ್ಯದೇಶ ಪಡೆಯದೆ ಕೆಲಸ ನಿರ್ವಹಿಸಿರುವುದು, ಮತ್ತು ಕೆಲಸ ನಿರ್ವಹಿಸದೆ ಹಣ ಪಡೆದಿರುವುದು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ತನಿಖೆಗೆ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತೇವೆ” ಎಂದರು.

ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರಾದ ಸಿದ್ದರಾಮಣ್ಣ , ಕಸವನಹಳ್ಳಿ ರಮೇಶ್ ,ಆರ್ ಕೆ ಗೌಡ, ಹರಳೀಕೇರೆ ತಿಪ್ಪೇಸ್ವಾಮಿ, ರಂಗಸ್ವಾಮಿ, ತಿಮ್ಮಾರೆಡ್ಡಿ, ವಿ ಆರ್ ರಂಗಸ್ವಾಮಿ, ತಿಮ್ಮಣ್ಣ, ಲೋಕಣ್ಣ, ಮಂಜುನಾಥ್, ತಿಮ್ಮರಾಯ, ರುದ್ರಪ್ಪ, ಚಿಕ್ಕಣ್ಣ ಹಾಗೂ ಇತರ ರೈತರು ಭಾಗವಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X