ಚಿತ್ರದುರ್ಗ | ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ಲ: ಕೆ.ಟಿ ಶಿವಕುಮಾರ್ ಕಿಡಿ

Date:

Advertisements

ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದಂತೆ ಕಾಣಿಸುವುದಿಲ್ಲ, ಇದರಿಂದ ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲವೆನ್ನುವುದು ಗೊತ್ತಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಚಿತ್ರದುರ್ಗ ನಗರದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆ ಶೇ. 60ರಷ್ಟು ಕನ್ನಡ ನಾಮಫಲಕಗಳಿರಬೇಕೆಂದು ಆದೇಶ ಜಾರಿಗಾಗಿ ನಡೆಸಿದ ಪ್ರತಿಭಟನೆ ವೇಳೆ ಅವರು ಮಾತನಾಡಿದರು, ಸರ್ಕಾರದ ಆದೇಶದ ಬಗ್ಗೆ ಜಿಲ್ಲಾಡಳಿತವಾಗಲಿ, ನಗರ ಸಭೆಯಾಗಲಿ, ಕನ್ನಡ ಸಂಸ್ಕೃತಿ ಇಲಾಖೆಯಾಗಲಿ ಆಸಕ್ತಿತೋರಿಸುತ್ತಿಲ್ಲ. ಕೂಡಲೇ ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಗಳನ್ನು ಅಳವಡಿಸುವಂತೆ ಸೂಚಿಸಬೇಕು, ಇಲ್ಲವಾದಲ್ಲಿ ಮಾರ್ಚ್ 4ರಂದು ಕರುನಾಡ ವಿಜಯ ಸೇನೆ ವತಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿ ಇಂಗ್ಲಿಷ್ ನಾಮಫಲಕಗಳನ್ನು ಕಿತ್ತೆಸಲಾಗುವುದೆಂದು ಎಚ್ಚರಿಸಿದರು.

ಪ್ರತಿ ಅಂಗಡಿ ಮುಂಗಟ್ಟು, ಶಾಲೆ, ಕಂಪನಿಗಳು ಹಾಗೂ ವ್ಯಾಪಾರ ವಹಿವಾಟು ನಡೆಸುವ ಸ್ಥಳಗಳಲ್ಲಿ ಶೇಕಡ 60 ರಷ್ಟು ಕನ್ನಡದಲ್ಲಿ ನಾಮಫಲಕಗಳಿರಬೇಕೆಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶ ಹೊರಡಿಸಿ ಫೆಬ್ರವರಿ 28 ರ ಗಡುವು ನೀಡಿದ್ದರು. ಆದರೆ ಇದುವರೆಗೂ ಆದೇಶ ಪಾಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಮತ್ತೊಮ್ಮೆ ಆದೇಶ ಪಾಲನೆ ಮಾಡುವ ಬಗ್ಗೆ ತಿಳಿಸಿ ಕನ್ನಡ ಪ್ರೇಮ ಬೆಳೆಸುವ ಸಲುವಾಗಿ ಗಾಂಧಿ ವೃತ್ತದಿಂದ ರಸ್ತೆಯ ಎರಡು ಬದಿಗಳಲ್ಲಿರುವ ಅಂಗಡಿಯವರಿಗೆ ಗುಲಾಬಿ ಹೂವು ನೀಡುವ ಮೂಲಕ ಕರುನಾಡ ವಿಜಯ ಸೇನೆ ಸಂಘಟನೆ ಪ್ರತಿಭಟನಾಕಾರರು ಆಂಗ್ಲ ಭಾಷೆಯ ಬದಲು ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಮನವೊಲಿಸಲು ಪ್ರಯತ್ನಿಸಿದರು.

Advertisements

ನಂತರ, ಕರ್ನಾಟಕ ರಾಜ್ಯ ಸರ್ಕಾರ ನಾಡಿನಾದ್ಯಂತ ಶೇ.60ರಷ್ಟು ಕನ್ನಡ ನಾಮಫಲಕಗಳಿರಬೇಕೆಂದು ಆದೇಶ ಹೊರಡಿಸಿದ್ದರೂ ಯಾರು ಪಾಲನೆ ಮಾಡುತ್ತಿಲ್ಲದಿರುವುದನ್ನು ಖಂಡಿಸಿ ಕನ್ನಡ ವಿಜಯ ಸೇನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷ್ಯೆ ವೀಣಾ ಗೌರಣ್ಣ, ಉಪಾಧ್ಯಕ್ಷ್ಯೆ ರತ್ನಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ಕಾರ್ಯದರ್ಶಿಗಳಾದ ಅಣ್ಣಪ್ಪ, ಜಗದೀಶ್ ಸಿ,  ನಗರಾಧ್ಯಕ್ಷ ಅವಿನಾಶ್, ತಾಲೂಕು ಅಧ್ಯಕ್ಷ ಎನ್.ಸಂತೋಷ್, ರಾಜಣ್ಣ, ಹರೀಶ್ ಕುಮಾರ್, ಅಖಿಲೇಶ್, ಕಮಲಮ್ಮ ಸೇರಿದಂತೆ ಇನ್ನೂ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X